ಶರಣರ ದರ್ಶನ ಕುರಿತು ೧೧ ದಿನಗಳ ಕಾಲ ಪ್ರವಚನ ನಡೆಸಿಕೊಟ್ಟ ನಿಜಗುಣಾನಂದ ಸ್ವಾಮೀಜಿಯವರು ಬಸವತತ್ವ ಕುರಿತ ಜಾಗೃತಿ ಮೂಡಿಸಿದ್ದಾರೆ. ಬಸವತತ್ವ ಬದುಕಾಗಬೇಕು ಎಂಬುದನ್ನು ಬಹಳಷ್ಟು ಮನಮುಟ್ಟುವಂತೆ ತಿಳಿಸಿಕೊಟ್ಟಿದ್ದಾರೆ. -ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಸುಲಫಲ ಮಠ, ಕಲಬುರಗಿ.
ಕಲಬುರಗಿ: ದಾಸೋಹ ಬಡತನ ನಿವಾರಣೆಯ ಶಕ್ತಿ ಅಲ್ಲ. ಭಕ್ತಿ ಪರಂಪರೆಯ ಚಳವಳಿ. ಹೆಚ್ಚಿರುವುದನ್ನು ಕೊಡುವುದೇ ಹೊರತು ಶೋಷಣೆಯುಕ್ತವಾಗಿ ದಾಸೋಹ ಮಾಡುವುದಲ್ಲ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ನುಡಿದರು.
ನಗರದ ಸುಲಫಲ ಮಠದಲ್ಲಿ ೭೫ನೇ ಅಮೃತ ಮಹೋತ್ಸವ, ಗುರುಗಳ ಪುಣ್ಯಸ್ಮರಣೆ ಹಾಗೂ ಶರಣ ದರ್ಶನ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಲಬುರಗಿಯ ಶರಣಬಸವೇಶ್ವರರು ಬಸವಾದಿ ಶರಣರ ದಾಸೋಹ ಪರಿಕಲ್ಪನೆ, ಪರಂಪರೆಯನ್ನು ಮುಂದುವರಿಸಿಕೊಂಡು ಬಂದರು ಎಂದು ತಿಳಿಸಿದರು.
ಸಾನ್ನಿಧ್ಯ ವಹಿಸಿದ್ದ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗಪಟ್ಟದ್ದೇವರು ಮಾತನಾಡಿ, ಮತ್ತೊಬ್ಬರ ಕಣ್ಣೀರು ಒರೆಸುವ ಕಾರ್ಯವೇ ನಿಜವಾದ ಪೂಜೆ. ವಚನಗಳು ಪಚನವಾದಾಗ ಮಾತ್ರ ಬದುಕಿಗೆ ಬೆಲೆ ಬರುತ್ತದೆ. ವಚನ, ಪ್ರಾಣ ಹಾಗೂ ಬಸವನಿಷ್ಠೆ ಬೆಳೆಸಿಕೊಳ್ಳಬೇಕು ಎಂದು ಆಶೀರ್ವಚನ ನೀಡಿದರು.
ಇದೇವೇಳೆಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸ್ನ್ ದಾಕ್ಷಾಯಣಿ ಎಸ್. ಅಪ್ಪ ಅವರಿಗೆ ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿದ್ದ ಕೆಕೆಆರ್ಡಿಬಿ ಅಧ್ಯಕ್ಷ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಮಾತನಾಡಿ ಸಾರಂಗಧರ ಶ್ರೀಗಳ ಸಾಮಾಜಿಕ ಕಾರ್ಯವನ್ನು ಶ್ಲಾಘಿಸಿದರು. ಚಿಂಚನಸೂರದ ಸಿದ್ಧಲಿಂಗ ಶಿವಾಚಾರ್ಯರು, ಡಾ. ರಾಜಶೇಖರ ಶಿವಾಚಾರ್ಯರು, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಮುಖಂಡರಾದ ನೀಲಕಂಠರಾವ ಪಾಟೀಲ ಮೂಲಗೆ, ಗೌಸ್ ಬಾಬಾ, ಸಿಪಿಐ ರಾಜಶೇಖರ ಹಳಿಗೋಧಿ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…