ಕಲಬುರಗಿ: ನಗರದ ಆವಂಟಿ ಬಿಲ್ಡಿಂಗ್ ನಲ್ಲಿ ಶ್ರೀ ಸೌಹಾರ್ದ ಪತ್ತಿನ ಸಹಕಾರಿ ಸಂಘದ 9ನೇ ಸಾಮಾನ್ಯ ಸಭೆ ನಡೆಯಿತು.
ಈ ಸಭೆಯನ್ನು ಉದ್ದೇಶಿಸಿ ಶ್ರೀ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ವಿಶ್ವನಾಥ ಟಿ. ಬೆಲ್ಲದ ರವರು ಮಾತನಾಡುತ್ತಾ, ಸಂಘವು ಯಶಸ್ವಿಯಾಗಿ 9 ವರ್ಷಗಳನ್ನು ಪೂರ್ಣಗೊಳಿಸಿದೆ. ಎಲ್ಲಾ ಸದಸ್ಯರ ಹಾಗೂ ನಿರ್ದೇಶಕ ಮಂಡಳಿಯ ನಿರ್ದೇಶಕ ಸತತ ಸಹಕಾರದಿಂದ ಸಂಘವು ಪ್ರತಿ ವರ್ಷ ಲಾಭದಲ್ಲಿ ನಡೆಯುತ್ತಿದೆ.
ಸಂಘವು ಸದಸ್ಯರ ಆರ್ಥಿಕ ಅಗತ್ಯತೆಗಳನ್ನು ಅರಿತುಕೊಂಡು ಅವರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲಗಳನ್ನು ವಿತರಿಸುತ್ತಿದೆ. ಅಲ್ಲದೆ ಸಂಘದ ಸದಸ್ಯರು ತಮ್ಮ ಆರ್ಥಿಕ ಚಟುವಟಿಕೆಗಳನ್ನು ಸರಿಯಾದ ರೀತಿಯಲ್ಲಿ ಮಾಡಿದರೆ ಸಂಘವು ಇನ್ನು ಬೆಳೆಯಲು ಸಾಧ್ಯ ಎಂದು ನುಡಿದರು.
ವೇದಿಕೆ ಮೇಲೆ ಸಂಘದ ಉಪಾಧ್ಯಕ್ಷರಾದ ಶ್ರೀ ಬಾಬು ಬಿ. ಪವಾರ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಕರಾದ ಶ್ರೀ ರಾಘವೇಂದ್ರ ಎಂ.ಜಿ. ಇದ್ದರು. ಕಾರ್ಯಕ್ರಮವನ್ನು sಸಂಘದ ಕಾನೂನು ಸಲಹೆಗಾರರಾದ ತಿಮ್ಮಯ್ಯ ಹೆಚ್. ಮಾನೆ. ರವರು ನಡೆಸಿಕೊಟ್ಟರು. ರಾಮಣ್ಣ ಎಸ್. ಇಬ್ರಾಹಿಂಪೂರ, ಎಲ್ಲಪ್ಪ ಬಾಂಬೆ, ಶಂಕರ ದಂಡಗುಲಕರ್, ಶರಣು ಸನಾದಿ, ನರಸಪ್ಪ ಮಾನೆ, ತಿಮ್ಮಯ್ಯ ಮಾನೆ, ಕಿರಣಕುಮಾರ, ನೀಲಕಂಠ ಹುಲಿ, ದುರ್ಗಣ್ಣ ವಿ. ಕುಸಾಳೆ, ಹಣಮಂತ ದಂಡಗುಲಕರ್, ಸೇರಿದಂತೆ ಅನೇಕ ಸದಸ್ಯರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…