ರಾಜ್ಯ ಉಪಾಧ್ಯಕ್ಷರಾಗಿ ಧರ್ಮರಾಜ ಜವಳಿ ಪದಗ್ರಹಣ

0
226

ಕಲಬುರಗಿ: ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಮಟ್ಟದ ಸಮಾವೇಶದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕಲಬುರಗಿ ಜಿಲ್ಲೆಯ ಉಪನ್ಯಾಸಕರಾದ ಧರ್ಮರಾಜ ಜವಳಿ ಪದಗ್ರಹಣ ಮಾಡಿದರು.

ಬೆಂಗಳೂರು ನಗರದ ಆನಂದರಾವ್ ವೃತ್ತದ ಬಳಿ ಇರುವ ಕೆಇಬಿಯ ವಿಶ್ವೇಶ್ವರಯ್ಯ ಸಭಾಗೃಹದಲ್ಲಿ ನಡೆದ ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಪೀಠದ ಶಾಂತ ಭೀಷ್ಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದು. ಮಾಜಿ ಮಂತ್ರಿಗಳು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಬಾಬುರಾವ ಚಿಂಚನಸೂರ, ವಿಧಾನ ಪರಿಷತ್ ಸದಸ್ಯ ಸಾಬಣ್ಣಾ ತಳವಾರ, ಸಮಾಜ ಕಲ್ಯಾಣ ಸಚಿವರ ಆಪ್ತ ಕಾರ್ಯದರ್ಶಿ ಕೆ ಧರ್ಮಪ್ಪಾ ಸರ್, ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ ನಾಗೇಂದ್ರ ಹೊನ್ನಳ್ಳಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

Contact Your\'s Advertisement; 9902492681

ರಾಜ್ಯಾಧ್ಯಕ್ಷ ಎನ್ ಶ್ರೀನಿವಾಸ, ಗೌರವಾಧ್ಯಕ್ಷ ಕೃಷ್ಣಯ್ಯ, ಪ್ರಧಾನ ಕಾರ್ಯದರ್ಶಿ ಹಾಲೇಶಪ್ಪ, ಕಲಬುರಗಿ ಜಿಲ್ಲಾ ಕೋಲಿ ಕಬ್ಬಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಅಧ್ಯಕ್ಷ ನೀಲಕಂಠ ಎಂ ಜಮಾದಾರ, ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಪಿ ತಳವಾರ, ಸಿದ್ದಪ್ಪಾ ಜಿ ಮಹಾಗಾಂವ, ದಾದಾಸಾಬ ಹೊಸೂರ, ಅವ್ವಣ್ಣಾ ತಳವಾರ ಹಾಗೂ ಸಮಾಜದ ನೌಕರ ಬಂಧುಗಳು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here