ಸೆ. 18ರಂದು ಹೂಗಾರ ಮಾದಣ್ಣನ ಜಯಂತಿ ಆಚರಣೆ

ಕಲಬುರಗಿ: ಕಲ್ಯಾಣಕರ್ನಾಟಕದಎಲ್ಲತಾಲೂಕು ಹೂಗಾರ ಸಮಾಜದಿಂದ ಸೆ.18ರಂದು ಮಧ್ಯಾಹ್ನ 1.30ಕ್ಕೆ ನಗರದ ವೀರಶೈವಕಲ್ಯಾಣ ಮಂಟಪದಲ್ಲಿ ಕಾಯಕಯೋಗಿ ಶರಣ ಹೂಗಾರ ಮಾದಯ್ಯನವರ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣಕರ್ನಾಟ ಹೂಗಾರ ಸಮಾಜದರಾಜ್ಯಗೌರವಾಧ್ಯಕ್ಷ ಶ್ರೀಗುರು ರಾಜೇಂದ್ರ ಶಿವಯೋಗಿಗಳು ತಿಳಿಸಿದರು.

ಅಂದು ಬೆಳಗ್ಗೆ 10ಕ್ಕೆ ನಗರದ ನೆಹರುಗಂಜ್‍ನ ನಗರೇಶ್ವರ ಶಾಲೆಯಿಂದ ವೀರಶೈವಕಲ್ಯಾಣ ಮಂಟಪದವರೆಗೆ ಶರಣ ಹೂಗಾರ ಮಾದಯ್ಯನವರ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಯಲಿದೆ.ಈ ಮೆರವಣಿಗೆಗೆ ಹೂಗಾರ ಸಮಾಜದ ಹಿರಿಯ ಮುಖಂಡರಾದ ಶಿವಶರಣಪ್ಪ ಹೂಗಾರ ನದಿಸಿನ್ನೂರ, ಬಸವರಾಜ ಹೂಗಾರರಾಯಚೂರುಅವರು ಚಾಲನೆ ನೀಡಲಿದ್ದಾರೆಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಹಾಲಕ್ಷ್ಮಿದೇವಿ, ನದಿ ಸಿನ್ನೂರನ ಶರಣ ಹೂಗಾರ ಮಾದಯ್ಯ ಶಕ್ತಿ ಪೀಠದ ಶ್ರೀಗುರು ರಾಜೇಂದ್ರ ಶಿವಯೋಗಿಗಳು ಸಾನ್ನಿಧ್ಯ ವಹಿಸಲಿದ್ದಾರೆ.ಶಿವಮೂರ್ತಿ ಶಿವಾಚಾರ್ಯರು, ರೇವಣಸಿದ್ಧ ಚರಂತೇಶ್ವರ ಶಿವಾಚಾರ್ಯರು, ಶರಣಬಸವ ಶರಣರು ನೇತೃತ್ವ ವಹಿಸಲಿದ್ದಾರೆ.ಸಂಸದ ಉಮೇಶ ಜಾಧವಉದ್ಘಾಟಿಸಲಿದ್ದಾರೆ.

ಕಲ್ಯಾಣಕರ್ನಾಟಕದ ಹೂಗಾರ ಸಮಾಜಜಿಲ್ಲಾಧ್ಯಕ್ಷ ಪ್ರಕಾಶ ಫುಲಾರಿಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ದತ್ತಾತ್ರೇಯ ಸಿ.ಪಾಟೀಲ್ ರೇವೂರ, ಬಿಜೆಪಿ ರಾಜ್ಯಉಪಾಧ್ಯಕ್ಷ ಮಾಲೀಕಯ್ಯಗುತ್ತೇದಾರ್‍ಜ್ಯೋತಿ ಬೆಳಗಿಸಲಿದ್ದಾರೆ. ಶಾಸಕರಾದ ಡಾ.ಅಜಯಸಿಂಗ್, ರಾಜಕುಮಾರ ಪಾಟೀಲ್‍ತೇಲ್ಕೂರ್, ಎಂ.ವೈ.ಪಾಟೀಲ್, ಸುಭಾಷಗುತ್ತೇದಾರ್, ಪ್ರಿಯಾಂಕ್‍ಖರ್ಗೆ, ಬಸವರಾಜ ಮತ್ತಿಮೂಡ್ ಸೇರಿದಂತೆಅನೇಕರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಬೇಡಿಕೆಗಳು:

ಹೂಗಾರ ಮಾದಯ್ಯನವರಜಯಂತಿ ಸರಕಾರದಿಂದಆಚರಿಸಬೇಕು. ಹೂಗಾರಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಹೂಗಾರ ಮಾದಯ್ಯನವರಗುರುಪೀಠ ಕಲಬುರಗಿಯಲ್ಲಿ ಸ್ಥಾಪಿಸಬೇಕು. ಬಸ್ ನಿಲ್ದಾಣದಎದುರು ಹೂವು ಮಾರಲಿಕ್ಕೆ ಮಳಿಗೆಗಳನ್ನು ನಿಡಬೇಕು. ಹೂಗಾರ ಸಮಾಜವನ್ನು ಎಸ್ಟಿಗೆ ಸೇರಿಸಬೇಕು. ಹೂಗಾರ ಸಮಾಜದ ಪೂಜೆ ಮಡುವ ಪೂಜಾರಿಗಳಿಗೆ ರೂ.10ರಿಂದ 12 ಸಾವಿರ ಪ್ರತಿ ತಿಂಗಳು ಭತ್ತೆ ನೀಡಬೇಕು. ದೇವರ ಹೆಸರಿನ ಮೇಲೆ ಇದ್ದ ಆಸ್ತಿಯನ್ನು ಪೂಜಾರಿಗಳ ಹೆಸರಿಗೆ ವರ್ಗಾಯಿಸಬೇಕುಎಂದುರಾಜೇಂದ್ರ ಶಿವಯೋಗಿಗಳು ಒತ್ತಾಯಿಸಿದರು.ದತ್ತು ಹೂಗಾರ, ಬಸವರಾಜ ಹೂಗಾರ, ಚನ್ನಬಸಪ್ಪ ಹೂಗಾರ, ಬಿ.ಪಿ.ಹೂಗಾರಇತರರಿದ್ದರು.

emedialine

View Comments

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420