ಬಿಸಿ ಬಿಸಿ ಸುದ್ದಿ

29 ರಂದು ಕಲಬುರಗಿ APMC ವಹಿವಾಟು ಬಂದ್

ಕಲಬುರಗಿ; ನಗರದ ಎಪಿಎಂಸಿ ಯಾರ್ಡ್ ಪ್ರದೇಶದಲ್ಲಿ ಮೂಲಸೌಕರ್ಯಕಲ್ಪಿಸಬೇಕುಎಂದು ಆಗ್ರಹಿಸಿ ಸೆ.29 ರಂದು ಎಪಿಎಂಸಿ ವಹಿವಾಟು ಬಂದ್ ಮಾಡಿ ಪ್ರತಿಭಟನೆ ನಡೆಸಲುಆಹಾರಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘ, ಅಖಿಲ ಭಾರತಕಿಸಾನ್ ಸಭಾ, ಕರ್ನಾಟಕ ಪ್ರಾಂತರೈತ ಸಂಘಗಳು ನಿರ್ಧರಿಸಿವೆ.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿಆಹಾರಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘದಅಧ್ಯಕ್ಷ ಶ್ರೀಮಂತ ಉದನೂರ, ಅಖಿಲ ಭಾರತಕಿಸಾನ್ ಸಭಾದ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಕರ್ನಾಟಕ ಪ್ರಾಂತರೈತ ಸಂಘದಅಧ್ಯಕ್ಷ ಶರಣಬಸಪ್ಪ ಮಮ್ಮಶೆಟ್ಟಿಅವರು ಮಾತನಾಡಿದರು.ವರ್ಷಕ್ಕೆ ಕನಿಷ್ಠ ರೂ.80 ಲಕ್ಷ ಆಸ್ತಿ ತೆರಿಗೆ ಪಾವತಿಸಿದ್ದರೂ ಎಪಿಎಂಸಿ ಯಾರ್ಡ್ನಲ್ಲಿ ಶುದ್ಧಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ಸಿ.ಸಿ ರಸ್ತೆ ನಿರ್ಮಾಣ, ಪಾಕಿರ್ಂಗ್ ವ್ಯವಸ್ಥೆ, ಭದ್ರತಾ ಸಿಬ್ಬಂದಿ ನಿಯೋಜನೆ ಸಮರ್ಪಕವಾಗಿಕಂಡುಬರುತ್ತಿಲ್ಲ. ಕೂಡಲೇ ಬೇಡಿಕೆಈಡೇರಿಸಬೇಕುಎಂದು ಆಗ್ರಹಿಸಿದರು.

ಕಳೆದ 70 ವರ್ಷಗಳ ಹಿಂದೆ ಎಪಿಎಂಸಿ ಯಾರ್ಡ್ರಚಿಸಲಾಗಿದ್ದು, ಇಲ್ಲಿಗೆ ಆಗಮಿಸುವ ರೈತರಿಗೆ ಕನಿಷ್ಟ ಸೌಲಭ್ಯಗಳಿಲ್ಲ. ಇನ್ನುಅಡತ್ ವ್ಯಾಪಾರಿಗಳು ಭಯದ ವಾತಾವರಣದಲ್ಲಿ ವ್ಯವಹರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಎಪಿಎಂಸಿ ಮೂರು ಪ್ರವೇಶ ದ್ವಾರಗಳಲ್ಲಿ ಕೊಳಚೆ ಮತ್ತುಚರಂಡಿ ನೀರು ಹರಿದಾಡುತ್ತಿದೆ.ಇದರಿಂದ ಉತ್ಪನ್ನಗಳ ಸಾಗಾಟಕ್ಕೆಅಡೆಚಣೆಉಂಟಾಗಿದೆ.ಈ ಬಗ್ಗೆ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಿದರೂ ಸ್ಪಂದನೆ ಸಿಗುತ್ತಿಲ್ಲ. ಇನ್ನು ಎಪಿಎಂಸಿ ಕಾರ್ಯದರ್ಶಿ ಅವರು ಸಹ ಅಸಹಾಯಕರಾಗಿದ್ದಾರೆ.

ಹೊಸ ಟ್ರೇಡ್ ಲೈಸನ್ಸ್ ಬಗ್ಗೆ ವಿಚಾರಿಸಿದರೆ ಜಿಲ್ಲಾಧಿಕಾರಿಗಳು ಸಭೆಕರೆದಿಲ್ಲ, ಎಪಿಎಂಸಿಗೆ ಆಡಳಿತ ಮಂಡಳಿ ಇಲ್ಲದಿರುವುದರಿಂದರೈತರು.  ವರ್ತಕರುತೊಂದರೆಅನುಭವಿಸುವಂತಾಗಿದೆಎಂದುಆಕ್ರೋಶ ವ್ಯಕ್ತಪಡಿಸಿದರು. ಸಂಗನಬಸಪ್ಪ ಹಿರೇಗೌಡ, ಸಂತೋಷಕುಮಾರ ಬಾರಿ, ಸಹದೇವ ಬಿರಾದಾರ್, ಎಂ.ಬಿ.ಸಜ್ಜನ್ಇತರರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago