ಸ್ವಾತಂತ್ರ್ಯದ ಕಿಚ್ಚು ಹಚ್ಚಿ, ಸ್ವಾತಂತ್ರ್ರ್ಯವನ್ನು ದೊರಕಿಸಿಕೊಟ್ಟ ಭಾಷೆ ಹಿಂದಿ ಭಾಷೆ

0
63

ಶಹಾಬಾದ: ಛೀದ್ರ ಛೀದ್ರವಾಗಿ ಹರಿದು ಹೋದ ಅಂದಿನ ಭಾರತವನ್ನು ಒಂದೇ ಸೂರಿನಡಿ ತಂದು ಸ್ವಾತಂತ್ರ್ಯದ ಕಿಚ್ಚು ಹಚ್ಚಿ, ಸ್ವಾತಂತ್ರ್ರ್ಯವನ್ನು ದೊರಕಿಸಿಕೊಟ್ಟ ಭಾಷೆ ಹಾಗೂ ಅತ್ಯಂತ ಮಹತ್ವ ಮತ್ತು ನಿರ್ಣಾಯಕ ಪಾತ್ರವಹಿಸಿದ ಭಾಷೆಯೇ ಹಿಂದಿ ಭಾಷೆ ಎಂದು ಸಾಹಿತಿ ಹಾಗೂ ಕಲಬುರಗಿ ದಯಾನಂದ ಹಿಂದಿ ಶಾಲೆಯ ಶಿಕ್ಷಕ ಸುನೀಲ ಚೌದ್ರಿ ಹೇಳಿದರು.

ಅವರು ಬುಧವಾರ ನಗರದ ರಾಷ್ಟ್ರ ಭಾಷಾ ಶಿಕ್ಷಣ ಸಮಿತಿಯ ಸೇಠ ಗೋವರ್ಧನಲಾಲ ಹಿಂದಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ಹಿಂದಿ ದಿನಾಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ಪಾಚೀನಕಾಲದಿಂದಲೂ ತನ್ನದೆಯಾದ ಪರಂಪರೆ, ಸಂಸ್ಕøತಿಯನ್ನು ಬೆಳೆಸಿಕೊಂಡು ಬಂದಿರುವ ಸುಂದರ, ಸ್ವಾರಸ್ಯಕರ ಹಾಗೂ ಕೇಳುವುದಕ್ಕೂ ಹಿತವಾಗಿರುವ ಸಂಪರ್ಕ ಭಾಷೆಯೇ ಹಿಂದಿ ಭಾಷೆಯಾಗಿದೆ. ರಾಷ್ಟ್ರೀಯ ಭಾಷೆಯಾಗಿರುವ ಹಿಂದಿಯು ದೇಶದ ಐಕ್ಯತೆ ಹಾಗೂ ಭಾವೈಕ್ಯತೆಯನ್ನು ಸಾರುವ ಭಾಷೆಯಾಗಿದ್ದು,ಎಲ್ಲರೂ ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು.ಆಂಗ್ಲ ಭಾಷೆಯ ವ್ಯಾಮೋಹದ ಮಧ್ಯೆಯೂ ಈ ಭಾಗದಲ್ಲಿ ಹಿಂದಿ ಮಾಧ್ಯಮ ಶಾಲೆಯನ್ನು ಪ್ರಾರಂಭ ಮಾಡಿ ರಾಷ್ಟ್ಟ್ರಬಾಷೆಯ ಪ್ರಚಾರ,ಪ್ರಸಾರ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಸ್ವಾತಂತ್ರ್ಯ ಪಡೆದ ನಂತರ ರಾಷ್ಟ್ರ ಭಾಷೆಯಾಗಿ ಯಾವ ಮಟ್ಟದಲ್ಲಿ ಬೆಳೆಯಬೇಕಾಗಿತ್ತೋ, ಆ ಮಟ್ಟದಲ್ಲಿ ಹಿಂದಿ ಭಾಷೆಯು ಬೆಳೆಯದೇ ಇರುವದು ವಿಷಾದನೀಯವಾಗಿದೆ.ಇಡೀ ದೇಶವನ್ನು ಬೆಸೆಯುವ ಸಂಪರ್ಕ ಭಾಷೆಯಾಗಿರುವ ಹಿಂದಿಯು ಶೇ.53 ರಷ್ಟು ಮಾತ್ರ ಬೆಳವಣಿಗೆ ಕಂಡಿರುವುದು ದುಃಖಕರ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು. ಪ್ರತಿಯೊಬ್ಬರಿಗೂ ಅವರದೇ ಆದ ಮಾತೃಭಾಷೆ ಬಗ್ಗೆ ಹೆಚ್ಚಿನ ಪ್ರೀತಿ ಇರುವುದು ಸಹಜ ಗುಣ. ಆದರೆ ರಾಷ್ಟ್ರದ ಪ್ರಶ್ನೆ ಬಂದಾಗ ಹಿಂದಿಯನ್ನು ನಾವು ಅನಿವಾರ್ಯವಾಗಿ ನಮ್ಮದಾಗಿಸಿಕೊಳ್ಳಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾದ ಎಸ್.ಎಸ್.ಮರಗೋಳ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಅನೀಲಕುಮಾರ ಕೊಪ್ಪಳಕರ್ ಮಾತನಾಡಿ, ಸಾಹಿತ್ಯಿಕವಾಗಿ ಸಮೃದ್ಧ ಭಾಷೆಯಾಗಿರುವ ಹಿಂದಿಯಲ್ಲಿ ಅತೀ ಹೆಚ್ಚಿನ ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಹಿರಿಮೆ ಇದೆ.ಇಂತಹ ದೇಶದÀ ಜನರೊಂದಿಗೆ ಬಾಂಧವ್ಯ ಬೆಸೆಯುವ ಹಿಂದಿ ಭಾಷೆಗೆ ನಾವೆಲ್ಲರೂ ಗೌರವಿಸಿ ಬೆಳೆಸಬೇಕಾಗಿದೆ ಎಂದು ಹೇಳಿದರು.

ಅತಿಥಿಗಳಾಗಿ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಅಧ್ಯಕ್ಷ ಬಾಲಕಿಶನ ವರ್ಮಾ,ಉಪಾಧ್ಯಕ್ಷರಾದ ಹಣಮಂತರಾಯ ಇಂಗಿನಶೆಟ್ಟಿ, ಕಾರ್ಯದರ್ಶಿ ದಿಲೀಪ ಯಲಶೆಟ್ಟಿ, ಸಿ.ಎ.ಇಂಗಿನಶೆಟ್ಟಿ ಕಾಲೇಜಿನ ಪ್ರಾಂಶುಪಾಲ ರಾಜಗೋಪಾಲ ಜೂಜಾರೆ, ಹಿಂದಿ ವಿದ್ಯಾಲಯದ ಮುಖ್ಯಗುರು ಬಾಬಾಸಾಹೇಬ ಸಾಳುಂಕೆ, ಹಿಂದಿ ಪ್ರಾಥಮಿಕ ಶಾಲೆಯ ಮುಖ್ಯಗುರುಮಾತೆ ಅನೀತಾ ಶರ್ಮಾ, ಎಸ್.ಎಸ್.ನಂದಿ ಪ್ರೌಢಶಾಲೆಯ ಮುಖ್ಯಗುರು ಸುಧೀರ ಕುಲಕರ್ಣಿ ವೇದಿಕೆಯ ಮೇಲಿದ್ದರು.

ಶಿಕ್ಷಕಿಯರಾದ ಲತಾ ಸಾಳುಂಕೆ ಹಾಗೂ ಸುಕನ್ಯಾ ಪ್ರಾರ್ಥಿಸಿದರು, ಮಲ್ಲಿನಾಥ ಪಾಟೀಲ ಸ್ವಾಗತಿಸಿದರು, ಮಹೇಶ್ವರಿ ಗುಳಿಗಿ ನಿರೂಪಿಸಿದರು, ಪ್ರಕಾಶ ಕೋಸಗಿಕರ್, ಪರಿಚಯಿಸಿದರು, ಅನೀತಾ ಶರ್ಮಾ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here