ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಕಲ್ಯಾಣದ ಕಲ್ಯಾಣಕ್ಕೆ ದಿಟ್ಟತನದ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಲು ಕಲ್ಯಾಣ ಕರ್ನಾಟಕದ ಇತಿಹಾಸ ರಚನಾ ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಹೋರಾಟಗಾರರಾದ ಲಕ್ಷ್ಮಣ ದಸ್ತಿ ಒತ್ತಾಯಿಸಿದರು.
ಡಾ.ಬಿ.ಆರ್ ಅಂಬೇಡ್ಕರ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕದಲ್ಲಿ ವಿಮೋಚನಾ ಚಳುವಳಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ್ನಾಡಿದ ಅವರು 371ನೇ ಜೇ ಕಲಂ ತಿದ್ದುಪಡಿ ಪಡೆದ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು ಸಂವಿಧಾನ 371j ಕಲಂ ತಿದ್ದುಪಡಿಯ ಸ್ಥಾನಮಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತ್ಯೇಕ ಮಂತ್ರಾಲಯ ಸ್ಥಾಪನೆ ಸೇರಿದಂತೆ ನೆನಗುದಿಗೆ ಬಿದ್ದಿರುವ ಕಲ್ಯಾಣದ ಬೇಡಿಕೆಗಳು ಈಡೇಸಲು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದರು..
ಕಲ್ಯಾಣ ಕರ್ನಾಟಕದಲ್ಲಿ ವಿಮೋಚನಾ ಚಳುವಳಿಯ ಗಂಭೀರತೆಯ ಬಗ್ಗೆ ಮತ್ತು ಸರದಾರ ಪಟೇಲರ ದಿಟ್ಟತನದಿಂದ ಹೈದ್ರಾಬಾದ ನಿಜಾಮ ರಾಜ್ಯ ಅಖಂಡ ಭಾರತದಲ್ಲಿ ವಿಲೀನವಾದ ವಿಷಯದ ಕುರಿತು ವಿವರವಾಗಿ ವಿಷಯ ಮಂಡಿಸಿರುವ ಅವರು ಕಲ್ಯಾಣದ ಕಲ್ಯಾಣಕ್ಕೆ ಸರ್ಕಾರ ವಿಶೇಷವಾಗಿ ಪರಿಗಣಿಸಲು ಅಗ್ರಹಿಸಿದರು.
ಸಬೆಯ ಅಧ್ಯಕ್ಷತೆವಹಿಸಿ ಮಾತ್ನಾಡಿದ ಶಾಂತಪ್ಪ ಸೂರನ್ ರವರು ಪ್ರಸ್ತುತ ಕಲ್ಯಾಣದ ಕಲ್ಯಾಣಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಜಯಕುಮಾರ ಡಿ ರವರು ಸ್ವಾಗತ ಕೋರಿದರು ಡಾ.ಗಾಂಧೀಜಿ ಮೋಳಕೇರೆರವರು ಸಭೆಗೆ ವಂದಿಸಿದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…