ಬಿಸಿ ಬಿಸಿ ಸುದ್ದಿ

ಪಿ.ಡಿ.ಎ. ಕಾಲೇಜಿಗೆ ಭಾರತಿಯ ರಕ್ಷಾಪಡೆಯ ಉಪ-ನಾಯಕ ಲೆಫ್ಟಿನೆಂಟ್ ಜನರಲ್ ಭೇಟಿ

ಕಲಬುರಗಿ: ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಂತ್ರಜ್ಞಾನ ದೊರೆಯುತ್ತಿದ್ದು ವಿದ್ಯಾರ್ಥಿಗಳು ಪ್ರಾಯೋಗಿಕ ಕಲಿಕೆಗೆ ಹೆಚ್ಚಿನ ಮಹತ್ವ ಕೊಡಬೇಕು. ಪ್ರಾಯೋಗಿಕ ಕಲಿಕೆಯಿಂದ ಮಾತ್ರ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಾಗುವುದು, ಈ ನಿಟ್ಟಿನಲ್ಲಿ ರಕ್ಷಣಾಪಡೆಯ ಕ್ಷೇತ್ರದೊಂದಿಗೆ ಒಡಂಬಡಿಕೆ ಮಾಡಿಕೊಡಲು ಅನುಕೂಲ ಮಾಡಿಕೊಡಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ರಕ್ಷಣಾಪಡೆಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಾಜೆಕ್ಟಗಳನ್ನು ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಭಾರತಿಯ ರಕ್ಷಣಾಪಡೆಯ ಲೆಫ್ಟಿನೆಂಟ್ ಜನರಲ್ ಬೆಗ್ಗಾವಲಿ ಸೋಮಶೇಖರ ರಾಜು, ರಕ್ಷಣಾ ಸಿಬ್ಬಂಧಿ ಉಪ-ನಾಯಕ ಅವರು ತಿಳಿಸಿದರು.

ಅವರು ಪಿ.ಡಿ.ಎ. ಕಾಲೇಜಿಗೆ ಔಪಚಾರಿಕ ಭೇಟಿಯನ್ನು ನೀಡಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ. ಬಿಲಗುಂದಿಯವರನ್ನು ಭೇಟಿಯಾಗಿ ಮಾತನಾಡಿದರು.

ಕಾಲೇಜನ್ನು ವೀಕ್ಷಿಸಿದ ಅವರು ಸಂಸ್ಥೆ ಹಾಗೂ ಪಿ.ಡಿ.ಎ. ಕಾಲೇಜಿನ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಬಿಜಾಪೂರದ ಸೈನಿಕ್ ಶಾಲೆಯ ಹಳೆಯ ವಿದ್ಯಾರ್ಥಿಯಾದ ಅವರು ೧೯೮೪ರಲ್ಲಿ ಭಾರತಿಯ ರಕ್ಷಣಾಪಡೆಯಲ್ಲಿ ತಮ್ಮ ಸೇವೆಯನ್ನು ಪ್ರಾರಂಭಿಸಿದರು. ತಮ್ಮ ೩೮ ವರ್ಷಗಳ ಸೇವಾವಧಿಯಲ್ಲಿ ’ಆಪರೇಶನ್ ಪರಾಕ್ರಮ’ ಹಾಗೂ ’ಉರಿ’ ಸೇರಿದಂತೆ ಅನೇಕ ಕಾರ್ಯಗಳಲ್ಲಿ ತಮ್ಮ ಸಾಮರ್ಥ್ಯವನ್ನು ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ. ಬಿಲಗುಂದಿಯವರು ಪಿ.ಡಿ.ಎ, ಕಾಲೇಜಿನ ವಿದ್ಯಾರ್ಥಿಗಳಿಗಾಗಿ ರಕ್ಷಣಾ ಪಡೆಯ ವತಿಯಿಂದ ವಿಶೇಶ ರೀತಿಯ ತಾಂತ್ರಿಕ ಸೌಲಭ್ಯ ದೊರಕಿಸಿಕೊಡಲು ವಿನಂತಿಸಿಕೊಂಡರು. ಅವರ ಧರ್ಮಪತ್ನಿ ಶ್ರೀಮತಿ ಶಕುಂತಲಾ ರಾಜು ಅವರು ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಇನಸ್ಟ್ರುಮೆಂಟೇಶನ್ ವಿಭಾಗದ ಪ್ರಥಮ ಬ್ಯಾಚ್ ವಿದ್ಯಾರ್ಥಿಯಾಗಿದ್ದು, ವಿಭಾಗಕ್ಕೆ ಪ್ರಥಮ ಸ್ಥಾನ ಪಡೆದಿದ್ದು ಇಲ್ಲಿ ಸ್ಮರಿಸಬಹುದು.

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಸಂಸದ ಡಾ. ಉಮೇಶ ಜಾಧವ, ಜಿಲ್ಲಾಧಿಕಾರಿ ಯಶವಂತ ವ್ಹಿ, ಗುರುಕರ ಹಾಗೂ ಮಹಾವಿದ್ಯಾಲಯದ ಉಪ ಪ್ರಾಚಾರ್ಯರುಗಳು, ಪರೀಕ್ಷಾ ನಿಯಂತ್ರಣಾಧಿಕಾರಿಗಳು, ಡೀನರು, ವಿಭಾಗದ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

13 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

13 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

15 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

15 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago