ಬಿಸಿ ಬಿಸಿ ಸುದ್ದಿ

ಕವಡಿಮಟ್ಟಿ:ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಗತಿ ಪರಿಶೀಲನಾ ಸಭೆ

ಸುರಪುರ: ಕೃಷಿ ವಿಜ್ಞಾನ ಕೇಂದ್ರ ಕವಡಿಮಟ್ಟಿಯ ಸಭಾಂಗಣದಲ್ಲಿ ರಾಯಚೂರು ಕೃಷಿ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ಕೆ. ಎನ್. ಕಟ್ಟಿಮನಿ ಇವರ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳನ್ನೊಳಗೊಂಡಂತೆ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳು, ಕೃಷಿ ಮಹಾವಿದ್ಯಾಲಯಗಳು ಹಾಗೂ ಕೃಷಿ ಸಂಶೋಧನಾ ಕೇಂದ್ರಗಳ ಮುಖ್ಯಸ್ಥರುಗಳೊಂದಿಗೆ ಸಭೆಯನ್ನು ಆಯೋಜಿಸಿ, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆಗಳಿಗೆ ಉಂಟಾದ ಹಾನಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

ಕುಲಪತಿಗಳು ಸಭೆಯಲ್ಲಿ ಮಾತನಾಡಿ, ಕಳೆದ ಕೆಲ ವಾರಗಳಿಂದ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸರಾಸರಿಗಿಂತಲೂ ಹೆಚ್ಚು ಮಳೆಯಾಗಿದೆ. ಅತಿಯಾದ ಮಳೆಯಿಂದಾಗಿ ಬೆಳೆಗಳ ಬೆಳವಣೆಗೆಯೂ ಕುಂಠಿತಗೊಳ್ಳುವದಲ್ಲದೆ, ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮಥ್ರ್ಯ ಕಡಿಮೆಯಾಗುವುದು.

ಇಂತಹ ಸಂದರ್ಭಗಳಲ್ಲಿ ಮಣ್ಣಿನಲ್ಲಿ ಹೆಚ್ಚಾಗಿರುವ ನೀರನ್ನು ಬಸಿದು ತೆಗೆದು, ಭೂಮಿಯನ್ನು ಶಾಶ್ವತವಾಗಿ ಸುಧಾರಿಸಬೇಕೆಂದರೆ, ದೀರ್ಘ ಕಾಲದ ಹೊಲದ ಸುತ್ತ ಬಸಿಗಾಲುವೆಗಳನ್ನು ತೆಗೆಯಬಹುದಾಗಿದ್ದು, ಬೆಳೆಯು ಸಂಪೂರ್ಣ ಹಾಳಾಗಿದ್ದರೆ ಕಡಲೆ, ಹಿಂಗಾರಿ ಜೋಳ, ನವಣೆ, ಕುಸುಬೆ, ಬೆಳೆಗಳನ್ನು ಪರ್ಯಾಯ ಬೆಳೆಯಾಗಿ ತೆಗೆದುಕೊಳ್ಳಬಹುದೆಂದು ಸಲಹೆ ನೀಡಿದರು.

ಈಗಾಗಲೇ ವಿವಿಧ ಬೆಳವಣಿಗೆ ಹಂತದಲ್ಲಿರುವ ಮುಂಗಾರು ಬೆಳೆಗಳಿಗೆ ಸಾಕಷ್ಟು ಹಾನಿಯಾಗುತ್ತಿದ್ದು, ರೈತರು ಅತಿವೃಷ್ಠಿಯಿಂದ ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು, ಕೃಷಿ ಸಲಹೆಗಳನ್ನು ಗ್ರಾಮೀಣ ಮಟ್ಟದಲ್ಲಿ ವಿವಿಧ ವಿಸ್ತರಣಾ ಚಟುವಟಿಕೆಗಳ ಮುಖಾಂತರ ತಲುಪಿಸಲು ವಿಶ್ವವಿದ್ಯಾಲಯದ ಪ್ರತಿ ವಿಜ್ಞಾನಿಗಳು, ಸಹಾಯಕ ಪ್ರಾಧ್ಯಾಪಕರುಗಳು, ವಿಷಯ ತಜ್ಞರುಗಳು ಇನ್ನೂ ಹೆಚ್ಚಿನದಾಗಿ ಶ್ರಮಿಸಬೇಕೆಂದು ಸೂಚಿಸಿದರು. ಕಲ್ಯಾಣ ಕರ್ನಾಟಕದ ಭಾಗದ ರೈತರಿಗೆ ಕೃಷಿ ಮಾಹಿತಿಯನ್ನು ನೀಡಲು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ಒಳಗೊಂಡ ವಿಜ್ಞಾನಿಗಳ ಸಮಿತಿಯು ರೈತರ ಕ್ಷೇತ್ರಗಳಿಗೆ ಭೇಟಿ, ನೀಡಿ ಸೂಕ್ತ ಕೃಷಿ ಮಾಹಿತಿಯನ್ನು ಒದಗಿಸಿ, ರೈತರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಬೇಕೆಂದು ವಿಜ್ಞಾನಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಡಾ. ಎಮ್. ಜಿ. ಪಾಟೀಲ್, ಶಿಕ್ಷಣ ನಿರ್ದೇಶಕರು, ಡಾ. ಬಿ. ಕೆ. ದೇಸಾಯಿ, ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು, ವಿಶ್ವವಿದ್ಯಾಲಯದ ಅಧಿಕಾರಿಗಳು, ವಿವಿಧ ಕೇಂದ್ರಗಳ ಮುಖ್ಯಸ್ಥರುಗಳು, ವಿಜ್ಞಾನಿಗಳು ಭೌತಿಕ ಮತ್ತು ಆನ್-ಲೈನ್ ಮುಖಾಂತರ ಸದರಿ ಸಭೆಯಲ್ಲಿ ಹಾಜರಿದ್ದರು.

emedialine

Recent Posts

ಫ.ಗು. ಹಳಕಟ್ಟಿ ವಚನ ತವನಿಧಿಯ ಸಂರಕ್ಷಕ: ಬಿ.ಆರ್. ಪಾಟೀಲ

ಕಲಬುರಗಿ: ಮನೆ, ಮಠ, ಜಗುಲಿಗಳಲ್ಲಿ ಪೂಜಿಸುತ್ತಿದ್ದ ತಾಡೋಲೆಗಳನ್ನು ಹೆಕ್ಕಿ ತೆಗೆದ ಫ.ಗು. ಹಳಕಟ್ಟಿಯವರು ವಚನ ಸಾಹಿತ್ಯದ ಪಿತಾಮಹ ಎಂದು ಮುಖ್ಯಮಂತ್ರಿಗಳ…

8 mins ago

ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಕಲಬುರಗಿ: ಸ್ಥಳೀಯ ಕೆಬಿಎನ್ ವಿವಿಯ ಕೆಬಿಎನ್ ಆಸ್ಪತ್ರೆಯಲ್ಲಿ ವೈದ್ಯರ ದಿನವನ್ನು ಆಚರಿಸಲಾಯಿತು. ರೇಡಿಯೋ ಡಿಗ್ನೋಸಿಸ ವಿಭಾಗದ ಮಾಜಿ ಮುಖಸ್ಥ ಡಾ.…

11 mins ago

ಈಡಿಗ ನಿಗಮ ಅನುದಾನಕ್ಕೆ ವಿಧಾನಸಭೆಯಲ್ಲಿ ಧ್ವನಿಯಾಗುವೆ: ಶಾಸಕ ಗವಿಯಪ್ಪ

ಕಲಬುರಗಿ : ರಾಜ್ಯದ ಈಡಿಗ ಬಿಲ್ಲವ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರವು ಘೋಷಣೆ ಮಾಡಿದ ಬ್ರಹ್ಮಶ್ರೀ ನಾರಾಯಣ…

15 mins ago

ಕಲ್ಯಾಣ ಕರ್ನಾಟಕದ 18 ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣ: ಡಾ. ಅಜುಸಿಂಗ್

ಕಲಬುರಗಿ: ಕಂದಾಯ ಇಲಾಖೆಯ ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ ನೂತನ 18 ತಾಲೂಕು ಕೇಂದ್ರಗಳಲ್ಲಿ ಆಡಳಿತ ವಿಧಾನಸೌಧಗಳನ್ನು ನಿರ್ಮಿಸಲು ತಲಾ…

18 mins ago

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

4 hours ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

6 hours ago