ಬಿಸಿ ಬಿಸಿ ಸುದ್ದಿ

ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಲಭ್ಯಕ್ಕೆ ಜೆಡಿಎಸ್ ಮನವಿ

ಸುರಪುರ: ನಾರಾಯಣಪೂರ ದಿಂದ ಕಕ್ಕೇರಾ ಮೂಲಕ ಜಿಲ್ಲಾ ಕೇಂದ್ರ ಯಾದಗಿರಿಗೆ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸುರಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಜನತಾದಳ(ಜಾತ್ಯಾತೀತ) ಪಕ್ಷದ ಮುಖಂಡರು ಒತ್ತಾಯಿಸಿದ್ದಾರೆ.

ಈ ಕುರಿತು ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ ಮಾತನಾಡಿ ಸುರಪುರ ಮತಕ್ಷೇತ್ರದ ಕೊನೆ ಭಾಗದಲ್ಲಿರುವ ನಾರಾಯಣಪೂರ ದಿಂದ ಬೆಳಿಗ್ಗೆ ಕಕ್ಕೇರಾ ಮಾರ್ಗವಾಗಿ ಜಿಲ್ಲಾ ಯಾದಗಿರಿಗೆ ಬಸ್ ಸಂಚಾರ ಕೈಗೊಳ್ಳಬೇಕು ಇದರಿಂದ ಈ ಭಾಗದ ಜನರಿಗೆ ಕಚೇರಿ ಕೆಲಸಕ್ಕೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿರುವ ಅವರು ಅಲ್ಲದೆ ಸುರಪುರ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಸುರಕ್ಷತೆ ವ್ಯವಸ್ಥೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು, ತಾಲೂಕು ಅಧ್ಯಕ್ಷ ಶೌಕತ್ ಅಲಿ ಖುರೇಷಿ, ಅಲ್ತಾಫ್ ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago