KSRTCಗೆ 45 ಕೋಟಿ ಮಂಜೂರು: ಕೋಲಿ ಸಮಾಜ ನೌಕರರ ಸಂಘ ಹರ್ಷ

ಕಲಬುರಗಿ: ಕೆ.ಕೆ.ಆರ್.ಟಿ.ಸಿ ಗೆ ೩೧೬ ಬಸ್ ಖರೀದಿಗೆ ೪೫ ಕೋಟಿ ರೂಪಾಯಿ ಅನುದಾನ ಮಂಜೂರಾತಿ ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಾರಿಗೆ ಸಚಿವ ಶ್ರೀರಾಮಲು ಹಾಗೂ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಕ.ಕ.ರ.ಸಾ.ನಿಗಮದ ಕಲಬುರಗಿ ವಿಭಾಗ-೧ರ ಕೋಲಿ ಸಮಾಜ ನೌಕರರ ಸಂಘವು ಅಭಿನಂದನೆ ಸಲ್ಲಿಸಿದೆ.

ನಿಗಮ ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೋವಿಡ್ ಹಿನ್ನಲೆಯಲ್ಲಿ ಆರ್ಥಿಕ  ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ  ಬಸ್ ಖರೀದಿಸಲು ೧೦೦ ಕೋಟಿ ಅನುದಾನ ನೀಡುವಂತೆ ಸರ್ಕಾರದ ಮೇಲೆ ಒತ್ತಡತರಲು ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿ ಸ್ಪಂದಿಸಿ, ವಿಶೇಷ ಮುತುವರ್ಜಿ ವಹಿಸಿ ರೇವೂರ್ ಅವರು ಮುಖ್ಯಮಂತ್ರಿಗಳಿಗೆ, ಸಾರಿಗೆ ಸಚಿವರಿಗೆ ಒತ್ತಾಯಿಸಿ ನಿಗಮಕ್ಕೆ ೩೧೬ ಬಸ್ ಗಳನ್ನು ಖರೀದಿಸಲು ೪೫ ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಇದಕ್ಕೆ ಸಹಕರಿಸಿದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಅವರಿಗೂ ಸಂಘವು ಅಭಿನಂದಿಸಿದೆ.

ಸಂಘದ ಅಧ್ಯಕ್ಷರಾದ ಶ್ರೀಮಂತ ಜಮಾದಾರ, ಗೌರವ ಅಧ್ಯಕ್ಷ ಭೀಮರಾವ ಯರಗೋಳ , ಪ್ರಧಾನ ಕಾರ್ಯದರ್ಶಿ ರಮೇಶ ಜೀವಣಗಿ , ಮುಖ್ಯ ಉಪಾಧ್ಯಕ್ಷ ಜಗದೀಶ ಎಸ್ ತೆಗನೂರ, ಕಾರ್ಯಾಧ್ಯಕ್ಷ ಶಂಕರ ತಳವಾರ, ಸಂಘಟನಾ ಕಾರ್ಯದರ್ಶಿ ನಿಂಗಪ್ಪ, ಚಿತ್ತಾಪೂರ ಘಟಕ ಚಂದ್ರಕಾಂತ ಚಿಂಚೋಳಿ, ಕಾಳಗಿ ಘಟಕ ವಿಜಯಕುಮಾರ ಜಮಾದಾರ, ಸಾಯಬಣ್ಣ ಜಮಾದಾರ, ಯಲ್ಲಾಲಿಂಗ ಅವರು ಅಭಿನಂದನೆ ಸಲ್ಲಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420