ಕೃಷಿ ಸಖಿಯರಿಗೆ “ಪರಿಸರ ಕೃಷಿ ವಿಧಾನಗಳು” ಕುರಿತು 6 ದಿನಗಳ ತರಬೇತಿ

ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಐಸಿಎಆರ್ – ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ, ಜಿಲ್ಲಾ ಪಂಚಾಯತ ಕಲಬುರಗಿ ಮತ್ತು ಸಂಜೀವನಿ-ಕರ್ನಾಟಕ ರಾಜ್ಯ ಗ್ರಾಮಿಣ ಜೀವನೋಪಾಯ ಸಂವರ್ಧನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿ) “ಪರಿಸರ ಕೃಷಿ ವಿಧಾನಗಳು” ಕುರಿತು 6 ದಿನಗಳ (12 ರಿಂದ 17 ಸೇಪ್ಟೆಂಬರ್ 2022) ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿಯಲ್ಲಿ ಒಟ್ಟು 34 ಜನ ಕೃಷಿ ಸಖಿಯರಿಗೆ ಪರಿಸರ ಕೃಷಿಯ ಬಗ್ಗೆ ಅರಿವು ಮುಡಿಸಲಾಯಿತು.

ಈ ತರಬೇತಿಯ ಸಮಾರೂಪ ಸಮಾರಂಭ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ ಡಾ.ಎಮ್.ಎಮ್.ಧಾನೋಜಿ, ಡೀನ್ (ಕೃಷಿ) ಕೃಷಿ ಮಹಾವಿದ್ಯಾಲಯ, ಕಲಬುರಗಿರವರು ಕೃಷಿ ಸಖಿಯರಿಗೆ ಸರಕಾರದಿಂದ ಅನುಷ್ಠಾನಗೊಂಡ ಯೋಜನೆಗಳನ್ನು ರೈತರಿಗೆ ಸಮರ್ಪಕವಾಗಿ ಬಳಸಿಕೊಳ್ಳಲು ತಿಳಿಸಬೇಕು. ಮುಖ್ಯ ಅತಿಥಿಯಾಗಿ ಡಾ. ಬಿ.ಎಮ್.ದೊಡ್ಡಮನಿ, ಸಹಸಂಶೋಧನಾ ನಿರ್ದೇಶಕರು, ವಲಯ ಕೃಷಿ ಸಂಶೋಧನಾ ಕೇಂದ್ರ, ಕಲಬುರಗಿ ಇವರು ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಒತ್ತು ಕೊಡಲು ಕೃಷಿ ಸಖಿಯರಿಗೆ ಹೇಳಿದರು ಹಾಗೂ ಡಾ. ರವಿಶಂಕರ್.ಜಿ, ವಿಶೇಷಾಧಿಕಾರಿಗಳು, ಕೃಷಿ ಮಹಾವಿದ್ಯಾಲಯ, ಹಗರಿ, ಬಳ್ಳಾರಿ ರವರು ಮಾತನಾಡಿ ಕೇಂದ್ರದಲ್ಲಿ ಪಡೆದ ವೈಜ್ಞಾನಿಕ ಮಾಹಿತಿಯನ್ನು ರೈತರಿಗೆ ವಿವರಿಸಬೇಕಾಗಿ ತಿಳಿಸಿದರು. ಕಾರ್ಯಕ್ರಮವನ್ನು ಡಾ.ರಾಜು ಜಿ. ತೆಗ್ಗಳ್ಳಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಸ್ವಾಗತಿಸಿದರೆ, ಡಾ. ಯುಸುಫ್‍ಅಲಿ, ವಿಜ್ಞಾನಿ, ಕೆವಿಕೆ ಕಲಬುರಗಿ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಕೃಷಿ ಸಖಿಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತ್ತು. ಕೊನೆಯಲ್ಲಿ ಡಾ.ಜಹೀರ ಅಹಮದ್, ವಂದನಾರ್ಪಣೆ ಮಾಡಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420