ಸುರಪುರ: ನಗರದಲ್ಲಿನ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ವಿವಿಧ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಬಿವಿಪಿ ಸಂಘಟನೆ ಯ ಕಲಬುರಗಿ ವಿಭಾಗ ಸಂಘಟನಾ ಕಾರ್ಯದರ್ಶಿ ಧನಂಜಯ ಮತ್ತು ವಿಭಾಗ ಸಹ ಪ್ರಮುಖ ಮತ್ತು ಉಪನ್ಯಾಸಕ ಡಾ: ಉಪೇಂದ್ರ ನಾಯಕ ಸುಬೇದಾರ್ ಮತ್ತು ನಗರ ಅಧ್ಯಕ್ಷರಾದ ಹನುಮಂತ ಶಿಂಗೆ ಅವರು ನಗರದ ಎಲ್ಲಾ ವಿದ್ಯಾರ್ಥಿ ನಿಲಯಗಳನ್ನು ಸಮೀಕ್ಷೆ ಮಾಡಿ ಊಟದ ವ್ಯವಸ್ಥೆ ಳ ಶೌಚಾಲಯಗಳ ನಿರ್ವಹಣೆ ಮತ್ತು ಗ್ರಂಥಾಲಯಗಳ ವ್ಯವಸ್ಥೆ ನೋಡಿ ಸಂತಸ ವ್ಯಕ್ತ ಪಡಿಸಿದರು.ಜೊತೆಗೆ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಸ್ವಚ್ಛತೆಯ ವಿಷಯದ ಕುರಿತು ಸಲಹೆ ನೀಡಿದರು.
ಬಾಲಕರ ವಸತಿ ನಿಲಯದ ಹಿಂದುಗಡೆ ಕೊಳಚೆ ಇಂದ ಕೂಡಿದ್ದು ನಗರ ಸಭೆ ಅಧಿಕಾರಿಗಳ ಗಮನಕ್ಕೆ ತಂದರು ಇಲ್ಲಿಯ ವರೆಗೆ ಸ್ವಚ್ಛ ಗೊಳಿಸಿಲ್ಲ ಇದರಿಂದ ಅನೇಕ ರೋಗಗಳು ಉಲ್ಬಣ ಆಗುವ ಸಂಭವ ಇದೆ ಎಂದು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಹೇಳಿದರು ಕೆಲವು ಹೊಸ ಕಟ್ಟಡಗಳು ಶಿಥಿಲ ಅವಸ್ತೆ ಆಗಿರುವುದನ್ನು ನೋಡಿ ಬೇಸರ ವ್ಯಕ್ತ ಪಡಿಸಿದರು…ಕೆಲವು ಸಲ ಆಹಾರ ಧಾನ್ಯಗಳಲ್ಲಿ ಹುಳುಗಳು ಬರುವ ಸಂಭವ ಇರುತ್ತದೆ ಒಳ್ಳೆ ರೀತಿ ಸ್ವಚ್ಛ ಮಾಡಿ ಎಂದು ಸಲಹೆ ನೀಡಿದರು.
10 ವರ್ಷದ ಹಿಂದೆ ಎಬಿವಿಪಿ ಇಡೀ ರಾಜ್ಯಾದ್ಯಂತ ಸಮೀಕ್ಷೆ ಮಾಡಿ ಒಂದು ಪುಸ್ತಕ ಹೊರ ತಂದು ಸರಕಾರಕ್ಕೆ ವಿದ್ಯಾರ್ಥಿ ವಸತಿ ನಿಲಯಗಳ ಸಮಸ್ಯೆ ಕುರಿತು ಗಮನಕ್ಕೆ ತಂದಿತ್ತು.ಪ್ರಸ್ತುತ ಈಗ ಸುರಪುರ ತಾಲ್ಲೂಕಿನ ಲ್ಲಿ,ಒಳ್ಳೆಯ ಸುಸಜ್ಜಿತ ನಿಲಯಗಳು ಆಗಿವೆ .ಊಟ ದ ವ್ಯವಸ್ಥೆಯು ಕೂಡ ಚೆನ್ನಾಗಿದೆ ಎಂದು ಸಂತೋಷವನ್ನು ವ್ಯಕ್ತ ಪಡಿಸಿದರು.
ಮುಂಬರುವ ದಿನಗಳಲ್ಲಿ ಶೈಕ್ಷಣಿಕ ಸಮಸ್ಯೆ ಇದ್ದಲ್ಲಿ ಎಬಿವಿಪಿ ಗಮನಕ್ಕೆ ತನ್ನಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.ಈ ಸಂದರ್ಭದಲ್ಲಿ ಬಿಸಿಎಮ್ ಅಧಿಕಾರಿ ತಿಪ್ಪಾರಡ್ಡಿ ಪಾಟೀಲ್ ಸೇರಿದಂತೆ ಅನೇಕ ವಿದ್ಯಾರ್ಥಿಗಳಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…