ಜ್ಞಾನ ವಿಕಾಸ ಕೇಂದ್ರದಲ್ಲಿ ಚಲನಚಿತ್ರ ಪ್ರದರ್ಶನ ಕಾರ್ಯಕ್ರಮ

0
48

ಸುರಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಾಗಣಗೇರಾ ವಲಯದ ಬೋವಿಗಲ್ಲಿ ಬಿ ಕಾರ್ಯಕ್ಷೇತ್ರದ ಸ್ಪೂರ್ತಿ ಜ್ಞಾನ ವಿಕಾಸ ಕೇಂದ್ರದಲ್ಲಿ ಚಲನಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಲ್ಲಮ್ಮ ,ಬಾನು ಬೇಗಂ ನಗರಸಭೆ ಸದಸ್ಯರಾದ ಮಹುಬೂಬ ಸಾಬ್ ಖುರೇಶಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.ತಾಲುಕು ಯೋಜನಾಧಿಕಾರಿ ಸಂತೋಷ ಭಾಗವಹಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಹಾಗೂ ಜ್ಞಾನ ವಿಕಾಸ ಕೇಂದ್ರಗಳ ಕಾರ್ಯ ಚಟುವಟಿಕೆಗಳ ಕುರಿತು ತಿಳಿಸಿಕೊಟ್ಟರು.ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಸದಸ್ಯರುಗಳಿಗಾಗಿ ಕಿರಗೂರಿನ ಗಯ್ಯಾಳಿಗಳು ಎನ್ನುವ ಸಾಮಾಜಿಕ ಕತಾಹಂದರವುಳ್ಳ ಚಲನಚಿತ್ರ ಪ್ರದರ್ಶಿಸಲಾಯಿತು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಸುಧಾ,ಸಮನ್ವಯಾಧಿಕಾರಿ ಸವಿತಾ,ಸೇವಾ ಪ್ರತಿನಿಧಿಗಳಾದ ರೇಖಾ,ಬಸಮ್ಮ ಸೇರಿದಂತೆ ಸಂಘದ ಅನೇಕ ಸದಸ್ಯರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here