ಬಿಸಿ ಬಿಸಿ ಸುದ್ದಿ

ಏಕಾಗೃತೆ ಅಧ್ಯಯನ ಬದುಕಿನ ಕಲೆ ರೂಪಿಸುತ್ತದೆ: ರಾಘವೇಂದ್ರ

ಆಳಂದ: ಏಕಾಗೃತೆ ಅಧ್ಯಯನ ಸವಾಲು ಮತ್ತು ಸಮಸ್ಯೆ ಅರಿಯುವ ಮೂಲಕ ಬದುಕಿನ ಕಲೆಯನ್ನು ರೂಪಿಸುತ್ತದೆ ಎಂದು ಕೇಂದ್ರ ಸರ್ಕಾರದ ಭಾರತೀಯ ಖಾದ್ಯ ನಿಗಮದ ನಿರ್ದೇಶಕ ಆಗಿರುವ ಎಂಎಆರ್‌ಜಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರಾಘವೇಂದ್ರ ಚಿಂಚನಸೂರ ಅವರು ಇಂದಿಲ್ಲಿ ಹೇಳಿದರು.

ಪಟ್ಟಣದ ಮಾತೋಶ್ರೀ ಗಂಗಮ್ಮ ಮೊಗಲಯ್ಯಾ ಗುತ್ತೇದಾರ ಸ್ಮಾರಕ ಕನ್ಯಾ ಪ್ರೌಢಶಾಲೆಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಶೈಕ್ಷಣಿಕ ವಿಕಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬದುಕು ಒಂದು ಕಲೆಯಾಗಿದೆ. ಇದನ್ನು ಹಲವು ವಿಧಗಳಲ್ಲಿರುವ ಶಿಕ್ಷಣದ ಮೂಲಕ ಗಟ್ಟಿಗೊಳಿಸಲು ಸಾಧ್ಯವಿದೆ. ತರಗತಿಯಲ್ಲಿನ ಪಠ್ಯ-ಪುಸ್ತಕದ ವಿಷಯಗಳು ಜೀವನಕ್ಕೆ ಹತ್ತಿರವೇ ಆಗಿರುತ್ತವೆ ಇದನ್ನು ಏಕಾಗೃತೆ ಮತ್ತು ನಿರಂತರತೆ ಮೂಲಕ ಗುರುಯನ್ನು ಮುಟ್ಟಬೇಕು. ಆದರ್ಶ ಬದುಕಿಗೆ ಸಾಧಕರ ಸಾಧನೆಗಳ ಸ್ಫೂರ್ತಿಯಾಗಿ ಪಡೆದು ವಿದ್ಯಾರ್ಥಿ ಜೀವನ ಹಸನಾಗಿಸಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರ ಪ್ರತಿಭೆ ಗ್ರಹಿಕೆ ಶಕ್ತಿಯನ್ನು ಶ್ರಮದ ಮೂಲಕ ಹೊರಹಾಕಿದಾಗ ಮಾತ್ರ ಇನ್ನೊಬ್ಬರಿಗೆ ಮಾದರಿಯಾಗಲು ಸಾಧ್ಯವಿದೆ. ವಿದ್ಯಾರ್ಥಿಗಳು ಪ್ರಶ್ನೆಸುವ ಮನೋಭಾವ ಬೆಳೆಸಿಕೊಂಡರೆ ಪರಿಪೂರ್ಣತೆ ಸಾಧಕರಾಗುತ್ತಾರೆ. ಈ ನಿಟ್ಟಿನಲ್ಲಿ ನಿರಂತರ ಕ್ರಮಬದ್ಧ ಅಧ್ಯಯನ ಮೈಗೂಡಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪತ್ರಕರ್ತ ಮಹಾದೇವ ವಡಗಾಂವ ಅವರು ಮಾತನಾಡಿ, ಕಠಿಣ ಪರಿಶ್ರಮ ನಿರಂತರ ಅಧ್ಯಯನ ಕೈಗೊಂಡರೆ ಕಂಡ ಕನಸು ನನಸಾಗಲು ಸಾಧ್ಯವಿದೆ ಎಂದರು.

ಅತಿಥಿಗಳಾಗಿ ಪಾಲ್ಗೊಂಡಿದ್ದ ಎಂಬಿಎಚ್‌ಜಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಲ್ಲಿನಾಥ ತುಕಾಣೆ ಅವರು, ಮಾತನಾಡಿ, ವಿದ್ಯಾರ್ಥಿದೀಸೆಯಿಂದಲೇ ಜ್ಞಾನಾರ್ಜನೆ, ಸಮಯ ಪ್ರಜ್ಞೆ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದರು.

ಶಾಲೆಯ ಮುಖ್ಯ ಶಿಕ್ಷಕ ಮಲ್ಲಿನಾಥ ಬುಕ್ಕೆ ಅವರು ಮಾತನಾಡಿ, ಪ್ರತಿವರ್ಷ ಉತ್ತಮ ಫಲಿತಾಂಶ ನೀಡುವ ಮೂಲಕ ವಿದ್ಯಾರ್ಥಿನಿಯರು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದಂತೆ ಪ್ರವೇಶ ಪಡೆದ ವಿದ್ಯಾರ್ಥಿನಿಯರ ಸಹ ಉತ್ತಮವಾಗಿ ಕಲಿತು ಮುಂದೆ ಬರಬೇಕು ಎಂದರು.
ಶಿಕ್ಷಕಿ ಸುಜಾತ ಸರಸಂಬಿ, ರೇಷ್ಮಾ ಕಠಾರೆ, ಮಂಜುನಾಥ ಗುತ್ತೇದಾರ ಉಪಸ್ಥಿತರಿದ್ದರು.

ಶಿಕ್ಷಕ ದಿನೇಶ ಕುರೇನ, ವಿದ್ಯಾರ್ಥಿನಿ ಪಲ್ಲವಿ ಶಾಂತಪ್ಪ, ಸಂಜನಾ ವಿಜಯಕುಮಾರ, ಕೀರ್ತಿ ವಿಜಯಕುಮಾರ, ಸೌಂದರ್ಯ ಬಸವರಾಜ, ಸೌಭಾಗ್ಯ ದೇವಿಂದ್ರ ಇತರರು ಮಾತನಾಡಿದರು. ಶಿಕ್ಷಕರಾದ ಮಹ್ಮದ್ ಶೇಖ ನಿರೂಪಿಸಿದರು. ಪುಷ್ಪಾ ವಗ್ಗನ ಸ್ವಾಗತಿಸಿದರು. ರಸೀಕಲಾ ಮುಲಗೆ ವಂದಿಸಿದರು.

emedialine

Recent Posts

ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನದ ಕರಪತ್ರ ಬಿಡುಗಡೆ

ಶಹಾಬಾದ:ಕಲಬುರಗಿಯಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ನಡೆಯುವ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ…

49 mins ago

ಕಾರ್ಮಿಕರು ರಾಜಕೀಯ ಸ್ಥಾನಮಾನ ಪಡೆದರೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯ: ನೀಲಾ

ಕಟ್ಟಡ ಕಾರ್ಮಿಕರ 2ನೇ ಶಾಖಾ ಸಮ್ಮೇಳನ : ಕಾಪೆರ್Çರೇಟ್ ಕಂಪೆನಿಗಳಿಗೆ ಧಾರೆ ಎರೆದ ದೇಶದ ಸಂಪತ್ತು ಶಹಾಬಾದ: ರಾಜಕೀಯ ಪಕ್ಷಗಳು…

52 mins ago

ವಿಕಲಚೇತರಿಗೆ ಅನುಕಂಪ ಬೇಡ ಮನುಷ್ಯರಂತೆ ಕಾಣಿ: ಡಾ.ಗವಿಸಿದ್ಧಪ್ಪ ಪಾಟೀಲ

ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…

11 hours ago

ಸತ್ಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ

ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…

12 hours ago

ಮಕ್ಕಳೊಂದಿಗೆ ಹುಟ್ಟ ಹುಬ್ಬ ಆಚರಿಸಿಕೊಂಡ ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…

13 hours ago

ಚಿಂಚೋಳಿ ಗ್ರಾಮ ಅಡಳಿತಾಧಿಕಾರಿಗೆ ಡಿ.ಸಿ. ಪ್ರಶಂಸನಾ ಪತ್ರ; ಪಹಣಿಗೆ ಆಧಾರ್ ಜೋಡಣೆಯಲ್ಲಿ ಸಾಧನೆ

ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420