ಬಿಸಿ ಬಿಸಿ ಸುದ್ದಿ

ಸಂಘಗಳು ಲಾಭದ ಕಡೆಗೆ ಮುಖಮಾಡಬೇಕಾದರೆ ಸಂಸ್ಥೆಯ ಸದಸ್ಯರ ಪಾತ್ರ ಮುಖ್ಯ

ಶಹಾಬಾದ: ಯಾವುದೇ ಸಹಕಾರ ಸಂಘಗಳು ಲಾಭದ ಕಡೆಗೆ ಮುಖಮಾಡಬೇಕಾದರೆ ಆ ಸಂಸ್ಥೆಯ ಸದಸ್ಯರ ಪಾತ್ರ ಮುಖ್ಯವಾಗಿರುತ್ತದೆ ಎಂದು ಶ್ರೀ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥ ಬೆಲ್ಲದ್ ಹೇಳಿದರು.

ಅವರು ನಗರದಲ್ಲಿ ಆಯೋಜಿಸಲಾದ ಶ್ರೀ ಸೌಹಾರ್ದ ಪತ್ತಿನ ಸಹಕಾರಿ ಸಂಘದ 9ನೇ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಘವು ಯಶಸ್ವಿಯಾಗಿ 9 ವರ್ಷಗಳನ್ನು ಪೂರ್ಣಗೊಳಿಸಿದೆ. ಎಲ್ಲಾ ಸದಸ್ಯರ ಹಾಗೂ ನಿರ್ದೇಶಕ ಮಂಡಳಿಯ ನಿರ್ದೇಶಕ ಸತತ ಸಹಕಾರದಿಂದ ಸಂಘವು ಪ್ರತಿ ವರ್ಷ ಲಾಭದಲ್ಲಿ ನಡೆಯುತ್ತಿದೆ. ಸಂಘವು ಸದಸ್ಯರ ಆರ್ಥಿಕ ಅಗತ್ಯತೆಗಳನ್ನು ಅರಿತುಕೊಂಡು ಅವರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲಗಳನ್ನು ವಿತರಿಸುತ್ತಿದೆ. ಅಲ್ಲದೆ ಸಂಘದ ಸದಸ್ಯರು ತಮ್ಮ ಆರ್ಥಿಕ ಚಟುವಟಿಕೆಗಳನ್ನು ಸರಿಯಾದ ರೀತಿಯಲ್ಲಿ ಮಾಡಿದರೆ ಸಂಘವು ಇನ್ನು ಬೆಳೆಯಲು ಸಾಧ್ಯ ಎಂದು ನುಡಿದರು.

ಸಂಘದ ಮುಖ್ಯ ಕಾರ್ಯನಿರ್ವಾಕರಾದ ರಾಘವೇಂದ್ರ ಎಂ.ಜಿ. ಮಾತನಾಡಿ, ಯಾವುದೇ ಸಂಘಗಳು ವೃತ್ತಿಪರೆತೆಯ ಜತೆಗೆ ಮಾನವೀಯತೆಯನ್ನು ಅಳವಡಿಸಿಕೊಳ್ಳುವುದು ಬಹುಮುಖ್ಯ. ಕಷ್ಟದಲ್ಲಿರುವ ಜನರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ನೀಡಿ, ಅವರಿಂದ ಸರಿಯಾದ ಸಮಯಕ್ಕೆ ಮರು ಪೂರೈಸಿದರೇ ಅವರು ಬೆಳವಣಿಗೆ ಹೊಂದುವುದಲ್ಲದೇ ಸಂಘದ ಅಭಿವೃದ್ಧಿಗೆ ಕಾರಣವಾಗುತ್ತದೆ. ವ್ಯಾಪಾರಿಗಳು, ಸಂಘದ ಸದಸ್ಯರುಗಳು ತಮ್ಮ ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳುವ ಜತೆಗೆ ಸಂಘದ ಅಭಿವೃದ್ಧಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲಸ ಮಾಡಬೇಕು.

ವೇದಿಕೆ ಮೇಲೆ ಸಂಘದ ಉಪಾಧ್ಯಕ್ಷ ಬಾಬು.ಬಿ.ಪವಾರ,ಸಂಘದ ಕಾನೂನು ಸಲಹೆಗಾರರಾದ ತಿಮ್ಮಯ್ಯ ಹೆಚ್. ಮಾನೆ, ರಾಮಣ್ಣ ಎಸ್. ಇಬ್ರಾಹಿಂಪೂರ, ಎಲ್ಲಪ್ಪ ಬಾಂಬೆ, ಶಂಕರ ದಂಡಗುಲಕರ್, ಶರಣು ಸನಾದಿ, ನರಸಪ್ಪ ಮಾನೆ, ತಿಮ್ಮಯ್ಯ ಮಾನೆ, ಕಿರಣಕುಮಾರ, ನೀಲಕಂಠ ಹುಲಿ, ದುರ್ಗಣ್ಣ ವಿ. ಕುಸಾಳೆ, ಹಣಮಂತ ದಂಡಗುಲಕರ್, ಸೇರಿದಂತೆ ಅನೇಕ ಸದಸ್ಯರು ಭಾಗವಹಿಸಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

2 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

2 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

2 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

2 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

3 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

3 hours ago