ನಾವು ಎಸ್ ಡಿಪಿಐ, ಪಿಎಫ್ಐ ಅನ್ನು ಬೆಂಬಲಿಸುತ್ತೇವೆಯೋ, ವಿರೋಧಿಸುತ್ತೇವೆಯೋ ಎಂಬ ಚರ್ಚೆಯನ್ನು ಈಗ ಬದಿಗಿಡೋಣಾ.
ದೇಶದಲ್ಲಿ ನಡೆದ ಹಲವಾರು ಘಟನೆ ಸಂಬಂಧ ಎಸ್ ಡಿಪಿಐ, ಪಿಎಫ್ಐ ಮೇಲೆ ಎನ್ಐಎ ದಾಳಿ ನಡೆಸಿದೆ. ಎನ್ಐಎ ದಾಳಿ ನಡೆಸುವಂತಹ ಬಾಂಬ್ ಅಟ್ಯಾಕ್ ಆಗಲೀ, ಭಯೋತ್ಪಾದಕರ ದಾಳಿಯಾಗಲೀ, ಗಣ್ಯರ ಹತ್ಯೆಯಾಗಲೀ ಇತ್ತಿಚೆಗೆ ನಮ್ಮ ದೇಶದಲ್ಲಿ ನಡೆದಿಲ್ಲ. ವಿಚಿತ್ರ ಎಂದರೆ ಎಸ್ ಡಿಪಿಐ ಕಚೇರಿಯ ಮೇಲೆ ಎನ್ಐಎ ದಾಳಿ ನಡೆಸಿರುವುದು ಸಣ್ಣಪುಟ್ಟ ಘಟನೆಗಳ ಹಿನ್ನೆಲೆಯಲ್ಲಿ ! ಠಾಣೆಯ ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ಒಬ್ಬರು ತನಿಖೆ ಮಾಡಬಹುದಾದ ಪ್ರಕರಣಗಳನ್ನು ಎನ್ಐಎಯಿಂದ ತನಿಖೆ ನಡೆಸಿ ಎಸ್ ಡಿಪಿಐ, ಪಿಎಫ್ಐ ಕಾರ್ಯಕರ್ತರ ಮೇಲೆ ಯುಎಪಿಎ ಕೇಸ್ ದಾಖಲು ಮಾಡಲಾಗುತ್ತಿದೆ. ಇದನ್ನು ಎಲ್ಲರೂ ವಿರೋಧಿಸಲೇಬೇಕು.
ಪ್ರವೀಣ್ ನೆಟ್ಟಾರ್ ಕೊಲೆ ದೇಶದ್ರೋಹ ಹೇಗಾಗುತ್ತೆ ?ಹಾಗಿದ್ದರೆ ಫಾಸಿಲ್, ಮಸೂದ್ ಕೊಲೆ ಯಾಕೆ ದೇಶದ್ರೋಹ ಆಗಲ್ಲ? ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಾಕಿದ್ದು ದೇಶದ್ರೋಹವಾದರೆ, ಬಿಜೆಪಿ ಶಾಸಕ ಸತೀಶ್ ರೆಡ್ಡಿಯವರ ಮನೆಗೆ ನುಗ್ಗಿ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದು ಯಾಕೆ ದೇಶದ್ರೋಹವಲ್ಲ ? ಡಿಜೆ ಹಳ್ಳಿಯಲ್ಲಿ ನಡೆದ ಕಲ್ಲು ತೂರಾಟ ದೇಶದ್ರೋಹವಾದರೆ, ಬಿಜೆಪಿಗರು ಸುಳ್ಯ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಮಾರಾಣಾಂತಿಕ ಹಲ್ಲೆ ನಡೆಸಿದ್ದು ಯಾಕೆ ದೇಶದ್ರೋಹ ಆಗಲ್ಲ?
ಹೀಗೆ ಸಣ್ಣಪುಟ್ಟ ಪ್ರಕರಣಗಳಿಗೆ ದೇಶದ್ರೋಹ ಪ್ರಕರಣ ದಾಖಲಿಸಿದರೆ ನಾಳೆ ಸರ್ಕಾರದ ಪರ ಇಲ್ಲದವರ ಮೇಲೆಲ್ಲಾ ದೇಶದ್ರೋಹ ಕಾಯ್ದೆ ದಾಖಲಿಸುವುದು ಸಹಜವಾಗಿ ಬಿಡುತ್ತದೆ. ಇದು ಅತ್ಯಂತ ಆತಂಕಕಾರಿ ಬೆಳವಣಿಗೆ.
ಹಾಗಾಗಿ ರಾಜ್ಯಗಳ ಕಾನೂನು ಸುವ್ಯವಸ್ಥೆ ವಿಷಯಕ್ಕೆ ಎನ್ಐಎ, ಸಿಬಿಐ ಯನ್ನು ಬಳಸುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಬೇಕಿದೆ. ರಾಜ್ಯಗಳ ಪೊಲೀಸರೆಂದರೆ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸೆಕ್ಯೂರಿಟಿ ಕೊಡುವವರಲ್ಲ ಎಂದು ರಾಜ್ಯಗಳು ಹೇಳಬೇಕಿದೆ.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…