ಗುರುಕುಲ ಆದರ್ಶ ಶಿಕ್ಷಕ ಪ್ರಶಸ್ತಿಗೆ ಪ್ರಾಚಾರ್ಯ ಬಸವರಾಜ ಮೊಳಕೀರೆ ಆಯ್ಕೆ

0
13

ಭಾಲ್ಕಿ: ಕಲ್ಯಾಣ ಕರ್ನಾಟಕ ಭಾಗದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ (ರಿ) ಭಾಲ್ಕಿ ವತಿಯಿಂದ ನಡೆಯುವ ಅಂಗಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಪ್ರೋತ್ಸಾಹಿಸುವ ಹಾಗೂ ಅವರ ಸೇವಾ ಸಾಧನೆಯನ್ನು ಗೌರವಿಸುವ ಸದುದ್ದೇಶದಿಂದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹಾಗೂ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಈ ವರ್ಷದಿಂದ “ಗುರುಕುಲ ಆದರ್ಶ ಶಿಕ್ಷಕ ಪ್ರಶಸ್ತಿ” ಯನ್ನು ಪ್ರಾರಂಭಿಸಿದ್ದಾರೆ. 2022-2023 ನೇ ಸಾಲಿನ ಈ ಪ್ರಶಸ್ತಿಗೆ ಶ್ರೀ ಚನ್ನಬಸವೇಶ್ವರ ಗುರುಕುಲ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಬಸವರಾಜ ಮೋಳಕೀರೆ ಅವರಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯ ಮೊತ್ತ ರೂ.25,000/- ಹಾಗೂ ಪ್ರಶಸ್ತಿ ಫಲಕ ಹೊಂದಿರುತ್ತದೆ. ಈ ಪ್ರಶಸ್ತಿಯನ್ನು ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಮೋಹನರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here