ಕಲಬುರಗಿ: ಸಿದ್ದೇಶ್ವರಪ್ಪ ಜಿ.ಬಿ. ಇವರಿಗೆ ಆತ್ಮೀಯ ಬೀಳ್ಕೊಡುಗೆ

0
15

ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕರ ಕಚೇರಿಯ ಹಿರಿಯ ಸಹಾಯಕ‌ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಇವರಿಗೆ ಸರ್ಕಾರವು ಉಪನಿರ್ದೇಶಕ ಹುದ್ದೆಗೆ ಬಡ್ತಿ ನೀಡಿ ಕೇಂದ್ರ ಕಚೇರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಗುರುವಾರ ಇಲ್ಲಿನ ವಾರ್ತಾ ಭವನದಲ್ಲಿ ಸಿಬ್ಬಂದಿಗಳಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಸಿಬ್ಬಂದಿಗಳಾದ‌ ಡಿ.ಕೆ.ರಾಜರತ್ನ, ರವಿ ಮಿರಸ್ಕರ್, ಉಮಾಶಂಕರ‌ ಚಿನಮಳ್ಳಿ, ಸೈಯದ್ ಇಸ್ಮಾಯಿಲ್ ಪಾಶಾ,‌ ನರಸಿಂಹ, ಅಶೋಕ, ಅಪ್ರೆಂಟಿಸ್ ಅಭ್ಯರ್ಥಿಗಳಾದ‌ ನಿರ್ಮಲಾ, ಉಮಾಶ್ರೀ ಅವರು ಸಿದ್ದೇಶ್ವರಪ್ಪ ಜಿ.ಬಿ. ಅವರಿಗೆ ಫಲತಾಂಬುಲ ಜೊತೆಗೆ ನೆನಪಿನ ಕಾಣಿಕೆ ನೀಡಿ ಬೀಳ್ಕೊಟ್ಟರು.

Contact Your\'s Advertisement; 9902492681

ಇದೇ‌ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿ ಸಿಂಗ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ಮತ್ತು ರಾಜ್ಯ ಪರಿಷತ್ ಸದಸ್ಯ ಶಿವರಂಜನ ಸತ್ಯಂಪೇಟ್ ಅವರ ನೇತೃತ್ವದಲ್ಲಿ ದೇವೆಂದ್ರಪ್ಪ ಅವಂಟಿ, ಬಾಬುರಾವ ಕೋಬಾಳ, ಭೀಮಾಶಂಕರ ಫಿರೋಜಾಬಾದ ಅವರನ್ನೊಳಗೊಂಡ ಪದಾಧಿಕಾರಿಗಳು ವರ್ಗಗೊಂಡ ಸಿದ್ದೇಶ್ವರಪ್ಪ ಜಿ.ಬಿ. ಅವರಿಗೆ ಸ್ಮರಣಿಕೆ‌ ನೀಡಿ ಪ್ರೀತಿಯಿಂದ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ದೇವೆಂದ್ರಪ್ಪ‌ ಕಪನೂರ, ಕರ್ನಾಟಕ ರಾಜ್ಯ ಪತ್ರಿಕಾ ಮಾನ್ಯತಾ ಸಮಿತಿ ಸದಸ್ಯ ಹಣಮಂತರಾವ ಭೈರಾಮಡಗಿ, ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನಿಕ‌ ಸಂಪಾದಕ ದೇವಯ್ಯ ಗುತ್ತೇದಾರ, ದಿ.ಹಿಂದೂ ಪತ್ರಿಕೆಯ ಪ್ರಧಾನ ವರದಿಗಾರ ಕುಮಾರ ಬುರುಡಿಕಟ್ಟಿ, ನೃಪತುಂಗ ಪತ್ರಿಕೆಯ ಸಂಪಾದಕ ಶಿವರಾಯ ದೊಡ್ಮನಿ ಸೇರಿದಂತೆ ಅನೇಕ ಹಿರಿಯ, ಕಿರಿಯ ಪತ್ರಕರ್ತರು,‌ ಸಂಪಾದಕರು ಇದ್ದರು.

ರವಿ ಮಿರಸ್ಕರ್ ಸ್ವಾಗತಿಸಿ ವಂದಿಸಿದರು. ಸಿದ್ದಣ್ಣ ಮಾಲಗಾರ ನಿರೂಪಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here