ಕಲಬುರಗಿ: ನಿನ್ನೆ ರಾತ್ರಿ 2 ಗಂಟೆಗೆ ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಒಡೆದು ಹಣ ಲೋಟಿ ಮಾಡಲು ಯತ್ನಿಸಿದ ಆರೋಪಿಯನ್ನು ಸ್ಟೇಷನ್ ಬಜಾರ್ ಪೊಲೀಸರು ಇಂದು ಕಾರ್ಯಚರಣೆ ನಡೆಸಿ ಆರೋಪಿಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಂತೋಷ ಹರಿಶ್ ಚಂದ್ರ ರಾಠೋಡ್ (22) ಬಂಧಿತ ಆರೋಪಿ, ಮೂಲತಃ ಚಿತ್ತಾಪೂರ ತಾಲ್ಲೂಕಿನ ಮುಗಳನಾಗಾವಿ ಗ್ರಾಮದ ನಿವಾಸಿಯಾಗಿದ ಇತ, ನಗರದ ಜಮಶೆಟ್ಟಿ ಬಡಾವಣೆಯಲ್ಲಿ ವಾಸಿಸುತ್ತಿದ್ದು, ನಿನ್ನೆ ರಾತ್ರಿ ತನ್ನ ಮೋಜಿನ ಜೀವನಕ್ಕಾಗಿ ರಾತ್ರಿಯಲ್ಲಿ ಎಟಿಎಂಗೆ ಬಂದು ಪೈಬರ್ ಡೋರ್ ಮುರಿದು ಎಟಿಎಂನ ಹಣ ಲೂಟಿ ಮಾಡಲು ಯತ್ನಿಸಿದ ನಡೆಸಿದ್ದಾನೆಂದು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕ್ಷಕರಾದ ಎಲ್.ಎಚ್ ಗೌಂಡಿ ಅವರು ತಿಳಿಸಿದ್ದಾರೆ.
ಅಧೀಕ್ಷಕ ಎಲ್ ಎಚ್ ಗೌಂಡಿ ಅವರ ನೇತೃತ್ವದ ತಂಡದ ಪಿಎಸ್.ಐ ಉದಂಡಪ್ಪ ಸಿಬ್ಬಂದಿ ಎಚ್.ಸಿ ನಜಮುದ್ದೀನ್, ಜೈ ಭೀಮ್, ಶಿವಾನಂದ ಹಾಗೂ ಪಿ.ಸಿ ಸುಲ್ತಾನ್, ಫೈರೋಜ್, ಕಾರ್ಯಚರಣೆ ನಡೆಸಿ ಆರೋಪಿ ಸಂತೋಷ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಕಬ್ಬಿಣದ ರಾಡನ್ನು ವಶಪಡಿಸಿಕೊಂಡಿದ್ದಾರೆ ಎಂದು ಗೌಂಡಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…