ಬೆಂಗಳೂರು: ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ನಲ್ಲಿ ದಾನಿ ಟ್ರಸ್ಟಿ ಮತ್ತು ಅಜೀವ ಟ್ರಸ್ಟಿಗಳ ನೇಮಕದಲ್ಲಿ ಅಕ್ರಮ ಹಾಗೂ ಇಡೀ ಟ್ರಸ್ಟಿನ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಲಪಟಾಯಿಸಲು ಶಾಮೀಲು ಆರೋಪಕ್ಕೆ ಗುರಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಬೆಂಗಳೂರಿನ ಸರ್ವಜ್ಞನಗರ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ರಮೇಶ್ ಗೌಡ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಕ್ಷದ ಕಾರ್ಯಕರ್ತರು ಸಚಿವರ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡರು; “ಸಚಿವ ಸ್ಥಾನಕ್ಕೆ ಅಶ್ವತ್ಥನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು, ಇಡೀ ಬಿಎಂಸ್ ಟ್ರಸ್ಟ್ ಅನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಅಕ್ರಮದ ಬಗ್ಗೆ ಉನ್ನತ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.
ವಿಧಾನಸಭೆ ಕಲಾಪದಲ್ಲಿಯೇ ನಮ್ಮ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತ ಹಗರಣವನ್ನು ಬಯಲು ಮಾಡಿದ್ದಾರೆ. ಆದರೆ, ತನಿಖೆ ನಡೆಸುವುದಿಲ್ಲ ಎಂದು ಹೇಳಿ ಬಿಜೆಪಿ ಸರಕಾರ ಭಂಡತನ ಪ್ರದರ್ಶಿಸುತ್ತಿದೆ ಎಂದು ಅವರು ಆರೋಪ ಮಾಡಿದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…