ಟ್ರಕ್‍ನಲ್ಲಿ ಸಾಗಿಸುತ್ತಿದ್ದ ದನಕರುಗಳನ್ನು ಪೊಲೀಸರಿಗೆ ಒಪ್ಪಿಸಿದ ದಿನೇಶ ಗೌಳಿ

0
66

ಶಹಾಬಾದ: ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮದ ಹತ್ತಿರ ಅಕ್ರಮವಾಗಿ ದನಗಳನ್ನು ಟ್ರಕ್‍ನಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಸಾಗಾಟ ಮಾಡುತ್ತಿದ್ದುದನ್ನು ಕಂಡು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ ತಡೆದು ಪೊಲೀಸರಿಗೆ ಒಪ್ಪಿಸಿ, ದನ, ಕರುಗಳನ್ನು ರಕ್ಷಿಸಿದ ಘಟನೆ ಸೋಮವಾರದಂದು ನಡೆದಿದೆ.

ಜೇವರ್ಗಿ ಕಡೆಯಿಂದ ಶಹಾಬಾದ ಕಡೆಗೆ ಬರುತ್ತಿದ್ದ ಅಶೋಕ್ ಲೈಲ್ಯಾಂಡ್ ಟ್ರಕ್ ವಾಹನ ಮಾರ್ಗ ಮಧ್ಯೆದಲ್ಲಿ ತೊನಸನಹಳ್ಳಿ(ಎಸ್) ಗ್ರಾಮದ ಹತ್ತಿರ ಅಕ್ರಮವಾಗಿ ದನಗಳನ್ನು ಟ್ರಕ್‍ನಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಸಾಗಾಟ ಮಾಡುತ್ತಿದ್ದುದನ್ನು ಕಂಡು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ ತಡೆದು ನಿಲ್ಲಿಸಿದಾಗ ವಾಹನದಲ್ಲಿ 27 ಎಮ್ಮೆ ಕರುಗಳು ಹಾಗೂ 9 ಆಕಳು ಕರು ಇದ್ದು ವಾಹನದದಲ್ಲಿ ಹಗ್ಗದಿಂದ ಬಿಗಿದು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡುಬಂದಿದೆ.ಕೂಡಲೇ ಗೆಳೆಯರನ್ನು ಕರೆದು ವಾಹನವನ್ನು ನಿಲ್ಲಿಸಿದ್ದಾರೆ.

Contact Your\'s Advertisement; 9902492681

ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ದನ ಕರುಗಳು ಶಹಾಬಾದ ಕಸಾಯಿ ಖಾನೆಗೆ ತೆಗೆದುಕೊಂಡು ಹೋಗುವರಿದ್ದರೆಂದು ತಿಳಿದುಬಂದಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಂತರ ದನಕರುಗಳನ್ನು ಕೊಂಚೂರು ಗೋಶಾಲೆಗೆ ಒಪ್ಪಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here