ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರಿಗೆ ಬೆಳ್ಳಿ ಕಿರೀಟ ತೊಡಿಸಿ ಸನ್ಮಾನ

0
19

ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಶ್ರೀ ವಿಶ್ವ ಗುರು ಬಸವೇಶ್ವರರ ಪುತ್ಥಳಿಯ ಆವರಣದಲ್ಲಿ ಕೆ.ಕೆ.ಆರ್.ಡಿ.ಬಿ ಇಲಾಖೆಯಿಂದ ಸುಮಾರು 87.60 ಲಕ್ಷ ರೂಪಾಯಿಗಳ ಅನುದಾನದಲ್ಲಿ ಆವರಣದ ಅಭಿವೃದ್ದಿ ಕಾಮಗಾರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾದ ದತ್ತಾತ್ರೇಯ ಸಿ.ಪಾಟೀಲ ರೇವೂರ ರವರು ಭೂಮಿ ಪೂಜೆಯನ್ನು ನೆರವೆರಿಸಿದರು.

ಈ ಸಂದರ್ಭದಲ್ಲಿ 889ನೇಯ ಶ್ರೀ ಬಸವೇಶ್ವರರ ಜಯಂತೋತ್ಸವ ಸಮಿತಿಯ ಕಲಬುರಗಿ ಜಿಲ್ಲಾಧ್ಯಕ್ಷರಾದ ರವಿ ಬಿರಾದರ ಕಮಲಾಪೂರ ರವರು ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರಿಗೆÉ ಬೆಳ್ಳಿ ಕಿರೀಟ ತೊಡಿಸಿ ಸನ್ಮಾನಿಸಿದರು.

Contact Your\'s Advertisement; 9902492681

ಈ ಕಾರ್ಯಕ್ರಮದಲ್ಲಿ ಪೂಜ್ಯರಾದ ಶ್ರೀ ರಾಜಶೇಖರ ಶಿವಾಚಾರ್ಯರು ಚವದಾಪೂರಿ ಹಿರೇಮಠ ಶ್ರೀಗಳು, ಸಂಸದರಾದ ಡಾ.ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರಾದ ಶರಣು ಮೋದಿ, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಪಾಟೀಲ, ಶರಣಬಸವೇಶ್ವರ ವಿಶ್ವ ವಿದ್ಯಾಲಯದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ, ಪ್ರಮುಖರಾದ ನಿಲಕಂಠರಾವ ಮೂಲಗೆ, ಮಂಜು ರೆಡ್ಡಿ, ಶ್ರೀಶೈಲ್ ಗೂಳಿ, ವೀರು ಸ್ವಾಮಿ ನರೋಣ್ಣ ಹಾಗೂ ಸೇರಿದಂತೆ ಸಮಾಜದ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here