ಕಲಬುರಗಿ: ತಾತ್ಕಾಲಿಕವಾಗಿ ಜಾನುವಾರುಗಳ ಜಾತ್ರೆ, ದನಗಳ ಸಂತೆ ನಿಷೇಧ

0
4

ಕಲಬುರಗಿ: ಜಿಲ್ಲೆ ಸೇರಿದಂತೆ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ರೋಗ ಹರಡದಂತೆ ಭಾರತ ಸರ್ಕಾರದ ಮಾರ್ಗಸೂಚಿಗಳನ್ವಯ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ತಾತ್ಕಾಲಿಕವಾಗಿ ಎಲ್ಲಾ ಜಾನುವಾರುಗಳ ಜಾತ್ರೆ ಹಾಗೂ ದನಗಳ ಸಂತೆಗಳನ್ನು ನಿಷೇಧಿಸಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಅದೇಶ ಹೊರಡಿಸಿದ್ದಾರೆ.

ಅದೇ ರೀತಿ ನೆರೆ ರಾಜ್ಯಗಳಿಂದ ಒಳಗೆ/ಹೊರಗೆ ಜಾನುವಾರುಗಳ ಸಾಗಾಣಿಕೆಯನ್ನು ಸಹ ತಾತ್ಕಾಲಿಕವಾಗಿ ನಿರ್ಭಂಧಿಸಲಾಗಿದೆ. ಮಹಾರಾಷ್ಟ್ರದ ಜಲಗಾಂವ, ಅಹ್ಮದ್ ನಗರ ಹಾಗೂ ಅಕೋಲಾ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here