ಛಾಯಾಗ್ರಾಹಕ ಸುರೇಶ ಹಳ್ಳಿಖೇಡ ನಿಧನ

0
48

ಕಲಬುರಗಿ: ಉತ್ತಮ ಛಾಯಾಗ್ರಾಹಕ ಹಾಗೂ ವೇಗವಾಹಿನಿ ಪತ್ರಿಕೆಯ ಸಂಪಾದಕ (50) ಸುರೇಶ ಹಳ್ಳಿಖೇಡ ಗುರುವಾರ ಇಂದು ನಿಧನ ಹೊಂದಿದರು.

ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರು ಸೋಲ್ಲಾಪೂರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

Contact Your\'s Advertisement; 9902492681

ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದರು. 25 ವರ್ಷಗಳಿಂದ ಉತ್ತರ ಕರ್ನಾಟಕ ಪತ್ರಿಕೆಯ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರಿಗೆ ಪತ್ನಿ, ಓರ್ವ ಪುತ್ರಿ, ಪುತ್ರ ಹಾಗೂ ತಾಯಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ನಾಳೆ ಶುಕ್ರವಾರ ಮೃತರ ಅಂತ್ಯಕ್ರಿಯೆ ನಡೆಯಲಿದೆ.

ಮೃತ ಸುರೇಶ ಅವರ ನಿಧನಕ್ಕೆ ಉತ್ತರ ಕರ್ನಾಟಕ ಪತ್ರಿಕೆಯ ಪ್ರಧಾನ ಸಂಪಾದಕ ಶಿವಶರಣಪ್ಪ ವಾಲಿ, ಸಂಪಾದಕ ಡಾ.ರಜನೀಶ ವಾಲಿ ಸೇರಿದಂತೆ ಉತ್ತರ ಕರ್ನಾಟಕ ಪತ್ರಿಕೆಯ ಸಿಬ್ಬಂದಿ ವರ್ಗ ತೀವ್ರ ದುಃಖ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ದುಃಖ ತಪ್ತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಕಲಬುರಗಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ರಾಜ್ಯ ಸಮಿತಿ ಸದಸ್ಯ ಡಾ.ಶಿವರಂಜನ್ ಸತ್ಯಂಪೇಟೆ, ಉಪಾಧ್ಯಕ್ಷರಾದ ದೇವೇಂದ್ರಪ್ಪ ಅವಂಟಿ, ಸುರೇಶ ಬಡಿಗೇರ, ರಾಮಕೃಷ್ಣ ಬಡಶೇಷಿ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ತೀವ್ರ ದುಃಖ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here