ಸಾವಯವ ಕೃಷಿ ಮತ್ತು ಗೋಕೃಪಾಮ್ಮತ ತಯಾರಿಸುವ ವಿಧಾನದ ಬಗ್ಗೆ ಒಂದು ದಿನದ ಕಾರ್ಯಾಗಾರ

ಕಲಬುರಗಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ, ಮತ್ತು ವಿಕಾಸ ಅಕಾಡೆಮಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಅರಿವಿನ ಮನೆ ಸಭಾಂಗಣದಲ್ಲಿ ಸಾವಯವ ಕೃಷಿ ಮತ್ತು ಗೋಕೃಪಾಮ್ಮತ ತಯಾರಿಸುವ ವಿಧಾನದ ಬಗ್ಗೆ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.

ಮುಖ್ಯ ಉಪನ್ಯಾಸಕರಾಗಿ ಗೋಪಾಲ ಭಾಯ್‌ ಸುತಾರಿಯ ಮತ್ತು ಡಾ.ಎಸ್‌.ಎ ಪಾಟೀಲ, ಕೃಷಿ ವಿಜ್ಞಾನಿಗಳು ಆಗಮಿಸಿದ್ದರು. ಕಾರ್ಯಾಗಾರವನ್ನು ಉದ್ಭಾಟಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶ್ರೀ ಬಸವರಾಜ್‌ ಪಾಟೀಲ್‌ ಸೇಡಂ, ಅಧ್ಯಕ್ಷರು, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸೃತಿಕ ಸಂಘ ರವರು ದೇಶ ತನ್ನ ತನ ಕಾಣಬೇಕಿದ್ದರೆ ಕೃಷಿ ಕಾಯಕ ಮತ್ತೆ ಗೌರವಯುತವಾಗಬೇಕಿದೆ, ಯುವಕರು ಕೆಲಸವನ್ನರಸಿ ಮಹಾನಗರಕ್ಕೆ ಹೋಗದೆ ಹಳ್ಳಿಯಲ್ಲೇ ಇದ್ದುಕೊಂಡು ಕೃಷಿ ಕಾಯಕದಲ್ಲಿ ತೊಡಗಿ ಸಂಪನ್ನರಾಗಿ ಸಂತೃಪ್ತ ಜೀವನ ನಡೆಸಬಹುದು ಎಂದು ಹೇಳಿದರು. ಸಾವಯವ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವದರಿಂದ ಖರ್ಚು ಕಡಿಮೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಡಾ. ಎಸ್‌.ಎ ಪಾಟೀಲ್‌ ತಮ್ಮ ಉಪನ್ಯಾಸದಲ್ಲಿ ಹೇಳಿದರು.

ಶ್ರೀ ಗೋಪಾಲಭಾಯಿ ಸುತರಿಯಾ ರವರು ಗೋಕೃಪಾಮೃತವನ್ನು ಕೃಷಿಕರು ಸ್ವಂತ ತಾವೇ ತಯಾರಿಸಿಕೊಂಡು ತಮ್ಮ ಜಮೀನಿನಲ್ಲಿ ಮತ್ತು ಬೆಳೆಗಳ ಮೇಲೆ ಸಿಂಪಡಿಸಿದಲ್ಲಿ ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಾಳು ಮೇಲಿರುವ ಅವಲಂಬನೆ ಕಡಿಮೆ ಮಾಡಿ ಉತ್ತಮವಾದ ಫಸಲು ಬೆಳೆಯಬಹುದು ಎಂದು ಹೇಳಿದರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ನಿರ್ದೇಶಕರು, ಕೃಷಿ ಉಪಸಮಿತಿಯ ಅಧ್ಯಕ್ಷರು ಮತ್ತು ವಿಕಾಸ ಅಕಾಡೆಮಿಯ ವಿಶ್ವಸ್ಥರಾದ ಶ್ರೀ ವಿ. ಶಾಂತರೆಡ್ಡಿ ಮತ್ತು ಶ್ರೀ ಭೀಮಾಶಂಕರ್‌ ತೆಗ್ಗಳ್ಳಿ ಉಪಸ್ಥಿತರಿದ್ದರು.

ಜಿಲ್ಲೆಯ ಮೂಲೆಮೂಲೆಗಳಿಂದ ಬ೦ದ ಸುಮಾರು 600 ರೈತರು ಕಾರ್ಯಾಗಾರದಲ್ಲಿ ಭಾಗವಹಿಸಿ ಗೋಕೃಪಾಮೃತ ಮತ್ತು ಸಾವಯವ ಕೃಷಿ ವಿಷಯದ ಕುರಿತು ಮಾಹಿತಿ ಪಡೆದರು. ಉಪನ್ಯಾಸದ ನಂತರ ಗೋಕೃಪಾಮೃತ ತಯಾರಿಸುವ ವಿಧಾನದ ಪ್ರಾತ್ಯಕ್ಷತೆ ಏರ್ಪಡಿಸಲಾಗಿತ್ತು ಮತ್ತು ಬ೦ದ ಎಲ್ಲ ರೈತರಿಗೆ ಗೋಕೃಪಾಮೃತ ಉಚಿತವಾಗಿ ಹಂಚಲಾಯಿತು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420