S.S. Tegnoor College: ಸ್ವಾಗತ, ಬಿಳ್ಕೋಡುಗೆ ಸಮಾರಂಭ

ಕಲಬುರಗಿ: ನಗರದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಎಸ್ .ಎಸ್. ತೆಗನೂರ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ನಗರದ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಇತ್ತಿಚಿಗೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಸಹಾಯಕ ಪೋಲಿಸ್ ಆಯುಕ್ತ ದಿಪನ್ ಎಂ.ಎನ್ ಹಾಗೂ ಪರಮಪೂಜ್ಯ ಶ್ರೀ ಸಿದ್ದಲಿಂಗ ದೇವರು ರಾವೂರ ಮಠ ಇವರು ಉದ್ಘಟಿಸಿದರು. ಮೂಖ್ಯ ಅತಿಥಿಗಳಾಗಿ ಆಗಮಿಸಿದ ದಿಪನ್ ಅವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗುವ ಸಿದ್ದತೆ ಸಲಕಕರಣೆ ಪರೀಕ್ಷಾ ಕ್ರಮ ಆಯ್ಕೆಯ ವಿಧಾನ ,ಶ್ರಮ, ಜ್ಞಾನ ಹಾಗೂ ಮಹತ್ವದ ಕುರಿತು ಮಕ್ಕಳಿಗೆ ಕಿವಿ ಮಾತು ಹೇಳಿದರು, ದಿವ್ಯ ಸಾನಿದ್ಯವಹಿಸಿ ಆಶೀರ್ವಾವಚನ ನೀಡಿದ ಶ್ರೀ ಸಿದ್ದಲಿಂಗಯ್ಯ ದೇವರು ಗುರುವಿನ ಜವಾಬ್ದಾರಿ ಮಹತ್ವ ಹಾಗೂ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಗುರುವಿನ ಪಾತ್ರ ಕುರಿತು ಮಕ್ಕಳಿಗೆ ತಿಳಿ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕ ವೃತ್ತಿಯಲ್ಲಿ ವಿಶೇಷ ಸಾಧನೆ ಗೈದಿರುವ ಆಯ್ಕೆ 05 ಶಿಕ್ಷಕರಿಗೆ “ ಅತ್ಯುತ್ತಮ ಶಿಕ್ಕಕ” ಪ್ರಶಸ್ತಿ ಪ್ರಧಾನ ಮಾಡಲಾಯಿತು. ಅಣವೀರ ಹರಸೂರ, ಸೋಮನಾಥ ರೆಡ್ಡಿ, ರಾಜಶೇಖರ ನಾಗಶೇಟ್ಟಿ, ಸಂಜಯ ರೇವಣಕರ್, ರಜನಿ. ಬಿ.ಎಸ್ ಇವರು ಪ್ರಶಸ್ತಿ ಪಡೆದು ಶಿಕ್ಷಕರಾಗಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಹಾಗೂ ಮೊದಲು ರ್ಯಾಂಕ್ ಪಡೆದ ಕಾಲೇಜು ವಿದ್ಯಾರ್ಥಿಗಳಾದ ಪ್ರೇರಣಾ ಮಣೂರೆ ಹಾಗೂ ನಾಗರತ್ನ ಬಸವರಾಜ ಇವರಿಗೆ ಸತ್ಕರಿಸಲಾಯಿತು.

ಅದೇ ರೀತಿ ದ್ವಿತೀಯ ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಸಿದ್ದಾಂತ, ನಾಜ್ಮೀನ್, ಮಧುಶ್ರೀ ಹಾಗೂ ಶೊಯಬ ಅಖ್ತರ ಅವರನ್ನು ಸತ್ಕರಿಸಲಾಯಿತು. ಹಾಗೇ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅಭಿμÉೀಕ ಅಫ್ಟಕರ, ಶ್ರೀದೇವಿ, ನಾರಾಯಣ ರಾಠೋಡ ಅವರಿಗೆ ಅತ್ಯತ್ತಮ ವಿದ್ಯಾರ್ಥಿಗಳೆಂದು ಸತ್ಕರಿಸಲಾಯಿತು. ಪ್ರಥಮ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ನೆನಪಿನ ಕಾಣಿಕೆ ನೀಡಲಾಯಿತು.

ಸಂಸ್ಥೆಯ ಟ್ರಸ್ಟ ಹಾಗೂ ಕಾಲೇಜಿನ ಪ್ರಚಾರ್ಯರಾದ ಡಾ: ಜ್ಯೋತಿ ಖ ತೆಗನೂರ ಅವರು ವಾರ್ಷಿಕ ವರದಿ ವಾಚನ ಮಾಡಿ ಸಂಸ್ಥೆ ನಡೆದು ಬಂದ ಹಾದಿ ಹಾಗೂ ಸಾಧನೆಗಳನ್ನು ಸ್ಮರಿನಿಕೊಂಡರು. ಹಾಗೇ ಪ್ರಾದ್ಯಪಕಿ ಕು.ಸಂಗೀತಾ ಕಂತಿ ಸಂಸ್ಥೆಯ ಪರಿಚಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾಡಿಕೊಟ್ಟರು, ಪ್ರಾದ್ಯಾಪಕರಾದ ರಮೇಶ ಬಡಿಗೇರ ಅಂತಿಮ ಪರಿಚಯ ಮತ್ತು ಸನ್ಮಾನ ಸಮಾರಂಭ ನಡೆಸಿಕೊಟ್ಟರು.
ಬಿಸಿಎಂ ಅಂತಿಮ ವರ್ಷದ ವಿದ್ಯಾರ್ಥಿ ವಿರೇಶ ಮರಪಳ್ಳಿ ತನ್ನ ಅನಿಸಿಕೆ ಹಂಚಿಕೊಂಡರು.

ಬಿಸಿಎ ವಿಭಾಗದ ವಿದ್ಯಾರ್ಥಿ ಜೇವನ ದೀಪಕ ಸ್ವಾಗತ ಭಾಷಣ ನಡೆಸಿಕೊಟ್ಟರು, ಬಿಸಿಎ ದ್ವಿತೀಯ ವರ್ಷದ ವಿದ್ಯಾರ್ಥಿ ಕೆ. ರಾಹುಲ್ ವಂದನಾರ್ಪಣೆ ಮಾಡಿದರು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕøತಿಕ ಕಾರ್ಯ ಕ್ರಮ ಗಮನಸೆಳೆದವು. ವೇದಿಕೆಯ ಮೇಲೆ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರವೀಂದ್ರ ಎಸ್. ತೆಗನೂರ ಹಾಗೂ ಟ್ರಸ್ಟಿಗಳಾದ ಡಾ: ಆದಿತ್ಯ ಆರ್. ತೆಗನೂರ ಸೇರಿದಂತೆ ಕಾಲೇಜಿನ ಭೋಧಕ ಭೋಧಕೇತರ ಹಾಗೂ ವಿದ್ಯಾರ್ಥಿಗಳು ಪಾಲಕ ಪೆÇೀಷಕರು ಉಪಸ್ಥಿತರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

17 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420