ಸುರಪುರ:ವಿದ್ಯುತ್ ತಂತಿ ಹರಿದುಬಿದ್ದ ಪರಿಣಾಮವಾಗಿ 9 ಕುರಿಗಳು ಸಾವನಪ್ಪಿರುವ ಧಾರುಣ ಘಟನೆಯೊಂದು ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕವಡಿಮಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿಯಲ್ಲಿನ ಭತ್ತದ ಗದ್ದೆಯಲ್ಲಿ ಕುರಿಗಾಹಿ ಅಯ್ಯಾಳಪ್ಪ ಕೆಂಗೂರಿ ಎನ್ನುವವರು ತಮ್ಮ ಅನೇಕ ಕುರಿಗಳನ್ನು ಮೇಯಿಸಲು ಹೊಡೆದುಕೊಂಡು ಹೋಗಿದ್ದರು ಎನ್ನಲಾಗಿದೆ,ಭತ್ತದ ಗದ್ದೆಯಲ್ಲಿ ಕುರಿಗಳು ಮೇಯುತ್ತಿರುವಾಗ ಪಂಪಸೆಟ್ ಮೋಟರ್ಗಳಿಗಾಗಿ ಹಾಕಲಾಗಿದ್ದ ವಿದ್ಯುತ ತಂತಿ ಹರಿದು ಬಿದ್ದಿದೆ ಎನ್ನಲಾಗುತ್ತಿದೆ.ಇದರಿಂದ ತಕ್ಷಣ ಮೇಯುತ್ತಿದ್ದ ಕುರಿಗಳ ಮೇಲೆ ತಂತಿ ಹರಿದು ಬಿದ್ದ ಪರಿಣಾಮವಾಗಿ ತಂತಿ 9 ಕುರಿಗಳಿಗೆ ತಗುಲಿದ್ದರಿಂದ ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಸುರಪುರ ಠಾಣೆ ಪೊಲೀಸರು ಹಾಗೂ ಪಶು ಸಂಗೋಪನಾ ಇಲಾಖೆ ತಾಲೂಕು ಅಧಿಕಾರಿ ಡಾ:ಸುರೇಶ ಅಚ್ಚಡ ಭೇಟಿಯನ್ನು ನೀಡಿದ್ದಾರೆ.ಕುರಿಗಳ ಸಾವಿಗೆ ವಿದ್ಯುತ್ ಅವಘಡ ಹೇಗೆ ಸಂಭವಿಸಿತು ಎನ್ನುವುದರ ಕುರಿತು ಪೊಲೀಸ್ ತನಿಖೆಯಿಂದ ನಿಖರ ಮಾಹಿತಿ ತಿಳಿದುಬರಲಿದೆ.ಕುರಿಗಳ ಸಾವಿನಿಂದ ಅಯ್ಯಾಳಪ್ಪ ತೀವ್ರ ನಷ್ಟಕ್ಕೊಳಗಾಗಿದ್ದು ಜೆಸ್ಕಾಂ ಇಲಾಖೆ ಅಥವಾ ಸರಕಾರ ಕುರಿಗಾಹಿ ಅಯ್ಯಾಳಪ್ಪಗೆ ಪರಿಹಾರ ನೀಡುವಂತೆ ಮನವಿ ಮಾಡುತ್ತಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…