ಮಾದ್ಯಮ ಕ್ಷೇತ್ರದಲ್ಲಿ ಬಣಗಾರ ಕೊಡುಗೆ ಅಪಾರ: ಬಣಗಾರ ಸಮಾಜದಿಂದ ಸನ್ಮಾನ

ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆಶಂಕರಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಇಂದು ಬುಧವಾರ ಬೆಳಿಗ್ಗೆ ಮಾಧ್ಯಮ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಇತ್ತೀಚೆಗೆ ಮುಖ್ಯಮಂತ್ರಿಯಿಂದ ಸನ್ಮಾನಿತಗೊಂಡಿರುವ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರು ಆದ ಸುಭಾಷ್ ಬಣಗಾರ ಅವರಿಗೆ ಸಮಾಜದ ಮುಖಂಡರು ಅವರ ಮನೆಯಲ್ಲಿ ಗೃಹ ಸನ್ಮಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಆನಂದ ದಂಡೋತಿ ಅವರು, ನಮ್ಮ ಸಮಾಜದಲ್ಲಿ ಅನೇಕರು ಎಲೆ ಮರೆಯ ಕಾಯಿಯಂತೆ ಸಮಾಜ ಸೇವೆಯಲ್ಲಿದ್ದು ಅವರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇಂದು ಬಣಗಾರ ಅವರ ಮನೆಯಲ್ಲಿ ಅವರ ಕುಟುಂಬ ಸಮೇತ ಸನ್ಮಾನಿಸಲಾಗಿದೆ. ಇದು ಅವರು ಸಾಮಾಜಿಕ ಹಾಗೂ ತಮ್ಮ ವೃತ್ತಿಯಲ್ಲಿ ಹೆಚ್ಚಿನ ಯಶಸ್ವಿಗೆ ಪ್ರೋತ್ಸಾಹ ನೀಡಿದಂತಾಗಿದೆ ಎಂದರು.

ಬಣಗಾರ ಅವರು ಕೇವಲ ಮುದ್ರಣ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ ಮಾಧ್ಯಮ ಕ್ಷೇತ್ರದ ದೂರದರ್ಶನ, ಆಕಾಶವಾಣಿ, ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಉಪನ್ಯಾಸಕರಾಗಿ ತಮ್ಮದೇ ಆದ ಪ್ರಾಮಾಣಿಕ ಸೇವೆಯೊಂದಿಗೆ ಗುರುತಿಸಿಕೊಂಡು, ರಾಜ್ಯ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪಡೆದಿರುವುದು ನಮ್ಮೆಲ್ಲರಿಗೂ ಸಂತಸವನ್ನುಂಟು ಮಾಡಿದೆ ಎಂದರು.

ಬಣಗಾರ‌‌ ಅವರ ಕುಟುಂಬದ ಹಲವಾರು ಜನರು ಮಾದ್ಯಮ ಕ್ಷೇತ್ರದಲ್ಲಿ ತೊಡಗಿದ್ದನ್ನೂ ಅವರು ಶ್ಲಾಘಿಸಿ, ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಬಗ್ಗೆ ಇವರಿಗೆ ಇರುವ ಕಾಳಜಿ ತೋರಿಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತ, ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರವರ ಮಾಧ್ಯಮ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜುನಾಥ ನಾಗಲೀಕರ್ ಕುಟುಂಬದವರನ್ನು ಕೂಡ ಸಮಾಜದ ವತಿಯಿಂದ ಗೌರವಿಸಿ ಸನ್ಮಾನಿಸಿದರು.

ಸಮಾಜದ ಮುಖಂಡರಾದ ನಾಗಪ್ಪ ರೋಣದ, ವೀರಪ್ಪ ಉಡಚಣ, ರವಿ ದಂಡೋತಿ, ಸಿದ್ದಣ್ಣ ಕಮರಡಗಿ, ಶಾಂತಪ್ಪ ಘೂಳಿ, ಗಾಳೆಪ್ಪ ದೊಡ್ಡಮನಿ, ರವಿ ನಿಂಬರ್ಗಿ, ಸೇರಿದಂತೆ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

emedialine

View Comments

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420