ಕಲಬುರಗಿ : ಪ್ರಯತ್ನದಿಂದ ಫಲಿತಾಂಶ ಸಾಧ್ಯ. ಪ್ರಯತ್ನಕ್ಕೆ ಮನಸು ಮಾಡಬೇಕು. ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಮೂಡಿಸಿಕೊಳ್ಳಬೇಕು. ಆತ್ಮವಿಶ್ವಾಸದಿಂದ ಇಡೀ ಜಗತ್ತನ್ನು ಗೆಲ್ಲಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಬೂಬ ಪಾಶಾ ಹೇಳಿದರು.
ಬೆಳಮಗಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶನಿವಾರ ನಡೆದ ಸಂಸತ್ತು ರಚನೆ, ೨೪ ಡಿಸ್ಟಿಂಕ್ಷನ್ ವಿದ್ಯಾರ್ಥಿಗಳಿಗೆ ಸತ್ಕಾರ ಹಾಗೂ ನೂತನವಾಗಿ ಪ್ರವೇಶ ಪಡೆದ ೬ನೇ ತರಗತಿ ಮಕ್ಕಳಿಗೆ ಸ್ವಾಗತ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವಂತಾಗಬೇಕು. ಆ ಮೂಲಕ ಈ ಭಾಗದಿಂದ ಐಎಎಸ್, ಕೆಎಎಸ್ ಪಾಸಾಗಿ ಉನ್ನತ ಹುದ್ದೆಗೇರುವ ಕನಸನ್ನು ನನಸನ್ನಾಗಿ ಮಾಡಿಕೊಳ್ಳಬೇಕು ಎಂದು ಕರೆಕೊಟ್ಟರು.
ಮುಖ್ಯ ಅತಿಥಿಗಳಾಗಿದ್ದ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಮಾತನಾಡಿ, ಇಂದಿನ ಅವಮಾನ, ನಾಳೆಯ ಸನ್ಮಾನ. ಇವತ್ತಿನ ವೇದನೆ ನಾಳಿನ ಸಾಧನೆ. ಹೀಗಾಗಿ ಇಂದು ಕಷ್ಟಪಟ್ಟು ಓದಿದರೆ ನಾಳೆ ಸುಖದ ಜೀವನ ನಡೆಸಲು ಸಾಧ್ಯ ಎಂದು ಹೇಳಿದರು.
ಬೆಳಮಗಿ ಗ್ರಾಮದ ಮುಖ್ಯ ರಸ್ತೆಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಹೋಗುವ ರಸ್ತೆ ತುಂಬಾ ಹದಗೆಟ್ಟಿದೆ. ವಿದ್ಯಾರ್ಥಿಗಳಿಗೆ ನಡೆದುಕೊಂಡು ಹೋಗಲು ಅಸಾಧ್ಯ ಎನಿಸುವಷ್ಟು ಕೆಟ್ಟುಹೋಗಿದೆ. ಇದನ್ನು ಶೀಘ್ರವೇ ಸಿಸಿ ರಸ್ತೆಯನ್ನಾಗಿ ಮಾಡಿಕೊಡುವುದಾಗಿ ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾವ ಮಲಾಜಿ ಹೇಳಿದರು. ಮಲೆನಾಡಿನಂತಹ ಪ್ರದೇಶ ಇರುವುದರಿಂದ ಇನ್ನಷ್ಟು ಹಚ್ಚಹಸಿರಾಗಿ ಬೆಳಮಗಿ ಶಾಲೆ ಸೌಂದರ್ಯ ಹೆಚ್ಚಲು ೫೦೦ ಸಸಿಗಳನ್ನು ತರಿಸಿಕೊಡುವುದಾಗಿ ಮಲಾಜಿ ಭರವಸೆ ನೀಡಿದರು.
ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಲಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಿಸ್ಟಿಂಕ್ಷನ್ ಬಂದಿರುವ ೨೪ ವಿದ್ಯಾರ್ಥಿಗಳಿಗೆ ಹಾಗು ಪ್ರಥಮ ಶ್ರೇಣಿಯಲ್ಲಿ ಪಾಸಾಗಿರುವ ೨೪ ವಿದ್ಯಾರ್ಥಿಗಳಿಗೆ ಸತ್ಕರಿಸಿದರು. ಹೊಸದಾಗಿ ಬಂದ ೬ ನೇ ತರಗತಿ ಶಾಲೆಯ ಮಕ್ಕಳಿಗೆ ಸಸಿಗಳನ್ನು ವಿತರಿಸುವ ಮೂಲಕ ಸ್ವಾಗತ ಕೋರಿದರು.
ಮುಖಂಡರಾದ ಹಣಮಂತರಾವ ಮಲಾಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಡೋಲೆ, ಶಿಕ್ಷಕ ಡಾ.ನಾಗರಾಜ ಹಳಗೋಧಿ, ಕಲ್ಯಾಣರಾವ ಮಾಲಿಪಾಟೀಲ ವೇದಿಕೆಯಲ್ಲಿದ್ದರು. ಶಾಲೆಯ ಪ್ರಾಚಾರ್ಯ ಅಣವೀರ ಹರಸೂರ ಅಧ್ಯಕ್ಷತೆ ವಹಿಸಿದ್ದರು. ಪ್ರದೀಪಕುಮಾರ ಸ್ವಾಗತಿಸಿದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…