ಸುರಪುರ: ರಾಜ್ಯ ಸರಕಾರ ಸರ್ವ ಪಕ್ಷಗಳ ಸಭೆ ನಡೆಸಿ ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣ ಹೆಚ್ಚಿಸುವ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಪಕ್ಷದಿಂದ ಸಂಭ್ರಮಾಚರಿಸಲಾಗಿದೆ.
ನಗರದ ಮಹಾತ್ಮ ಗಾಂಧಿ ವೃತ್ತ ಹಾಗೂ ಡಾ:ಬಿ.ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಅನೇಕ ಮುಖಂಡರು,ಶ್ರಿಮಹರ್ಷಿ ವಾಲ್ಮೀಕಿ ಹಾಗೂ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಶ್ರೀ ಮಹರ್ಷಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿಯವರು ಕಳೆದ 8 ತಿಂಗಳಿಂದ ನಿರಂತರ ಹಗಲಿರಳು ಹೋರಾಟ ನಡೆಸಿದರು.ಅಲ್ಲದೆ ಈ ಮುಂಚೆಯೇ ನಮ್ಮ ನಾಯಕರಾದ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರು ನಿರಂತರ ಶ್ರಮವಹಿಸಿದ್ದರಿಂದ ಇಂದು ಸರಕಾರ ಎಸ್.ಸಿ ಮತ್ತು ಎಸ್.ಟಿ ಸಮುದಾಯದ ಮೀಸಲು ಹೆಚ್ಚಿಸುವುದಾಗಿ ಹೇಳಿಕೆ ನೀಡಲು ಕಾರಣವಾಗಿದೆ.ಆದ್ದರಿಂದ ಮೀಸಲು ಹೆಚ್ಚಳಕ್ಕೆ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರಕಾರ ಮತ್ತು ಇದಕ್ಕೆ ಸಹಕಾರ ನೀಡಿರುವ ಕೇಂದ್ರ ಸರಕಾರಕ್ಕೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಂಕರ ನಾಯಕ,ಬ¯ಭೀಮ ನಾಯಕ ಬೈರಿಮಡ್ಡಿ,ವಿಷ್ಣು ಗುತ್ತೇದಾರ,ಶರಣು ನಾಯಕ ಬೈರಿಮಡ್ಡಿ,ಶರಣು ನಾಯಕ ಡೊಣ್ಣಿಗೇರಾ,ವೆಂಕಟೇಶ ನಾಯಕ ಬೈರಿಮಡ್ಡಿ,ದೇವರಾಜ ನಾಯಕ,ಈಶ್ವರ ನಾಯಕ,ಶ್ರೀನಿವಾಸ ನಾಯಕ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…