ಸುರಪುರ: ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಲು ತಾಲೂಕಿನಿಂದ ಸಾವಿರಾರು ಜನ ಭಾಗವಹಿಸುತ್ತಿರುವುದಾಗಿ ಮುಖಂಡ ವೆಂಕಟೇಶ ಬೇಟೆಗಾರ ತಿಳಿಸಿದರು.
ತಾಲೂಕಿನ ಆಲ್ದಾಳ ಗ್ರಾಮದಲ್ಲಿ ಪ್ರಯಾಣಕ್ಕೆ ಚಾಲನೆ ನೀಡಿ ಮಾತನಾಡಿ,ಸರಕಾರ ಇಂದು ಕೇವಲ ಹೇಳಿಕೆ ನೀಡಿದೆ,ಆದರೆ ಅದು ಜಾರಿಯಾಗಬೇಕೆಂದು ನಾವು ಒತ್ತಾಯಿಸುತ್ತೇವೆ.ಆದ್ದರಿಂದ ನಮ್ಮ ಪ್ರಸನ್ನಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಸ್ವಾಮೀಜಿಗಳು ಹಾಗೂ ಮುಖಂಡರ ಸಹಭಾಗಿತ್ವದಲ್ಲಿ ನಡೆಯಲಿರುವ ಹೋರಾಟದಲ್ಲಿ ಭಾಗವಹಿಸಲು ತಾಲೂಕಿನಿಂದ ಸಾವಿರಾರು ಜನರು ಹೋಗುತ್ತಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡ ರಮೇಶ ದೊರೆ ಆಲ್ದಾಳ ಸೇರಿದಂತೆ ಅನೇಕರು ಭಾಗವಹಿಸಿ ಪ್ರಯಾಣವನ್ನು ಆರಂಭಿಸಿದರು.