ಬಿಸಿ ಬಿಸಿ ಸುದ್ದಿ

ಸುರಪುರ: ಬಣಗಾರ ಸಮಾಜದ ಪದಾಧಿಕಾರಿಗಳ ಆಯ್ಕೆ

ಸುರಪುರ: ಸುರಪುರ ತಾಲೂಕು ವೀರಶೈವ ಬಣಗಾರ ಸಮಾಜದ ವತಿಯಿಂದ ಈ ದಿನ ಅಂದರೆ ಭಾನುವಾರ ಬೆಳಿಗ್ಗೆ ರಂಗಪೇಟೆಯ ಶ್ರೀ ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಸಮಾಜದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಶಿವಲಿಂಗಪ್ಪ ಸುರಪುರ ಅವರು ವಹಿಸಿದ್ದರು.

ನೂತನ ಪದಾಧಿಕಾರಿಗಳು: ಗೌರವ ಅಧ್ಯಕ್ಷರಾಗಿ ಶಂಕ್ರಪ್ಪ ಬಣಗಾರ್, ಅಧ್ಯಕ್ಷರಾಗಿ ಶಿವಲಿಂಗಪ್ಪ ಸುರಪುರ, ಉಪಾಧ್ಯಕ್ಷರಾಗಿ ರಮೇಶ್ ಶಿರಗೋಜಿ, ಕಾರ್ಯದರ್ಶಿಯಾಗಿ ಚಂದ್ರಶೇಖರ್ ಮಂಡಾ, ಖಜಾಂಚಿಯಾಗಿ ಸುರೇಶ್ ಖಾದಿ, ಹಾಗೂ ಸದಸ್ಯರಾಗಿ ಗುರುಲಿಂಗಪ್ಪ ಖಾದಿ, ಚಂದ್ರಶೇಖರ್ ಮಸ್ಕಿ, ಸಿದ್ದಪ್ಪ ಕೋಲ್ಕುಂದಿ ಲಕ್ಷ್ಮಿಪುರ, ಸುರೇಶ್ ಚಂದ್ರಕಾಂತ್ ಖಾದಿ, ಸಂತೋಷ್ ಕುಮಾರ ಬಣಗಾರ್, ನಾಗರಾಜ್ ಎಸ್. ಬಣಗಾರ ರುಕ್ಮಾಪುರ, ಶಿವಕುಮಾರ್ ಖಾದಿ, ಪ್ರಕಾಶ್ ಬಣಗಾರ್ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲದೆ ಸಮಾಜದ ಗೌರವ ಸಲಹೆಗಾರರನ್ನಾಗಿ ಸುಭಾಷ್ ಬಣಗಾರ ಅವರನ್ನು ಆಯ್ಕೆ ಮಾಡಲಾಯಿತು.

ಎಲ್ಲರೂ ಸೇರಿ ಸಮಾಜದ ಅಭಿವೃದ್ಧಿ ಹಾಗೂ ಸಂಘಟನೆಗೆ ನಿರ್ಧರಿಸಿದರು. ಈ ಸಂದರ್ಭದಲ್ಲಿ ಕಾಶಿನಾಥ್ ಶಿರಗೋಜಿ, ಶಂಕರ್ ಚಿಂಚೋಳಿ, ನಿತೀಶ್ ಶಿರಗೋಜಿ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

ಸಂತಾಪ: ಸಭೆಯ ಆರಂಭದಲ್ಲಿ ಶನಿವಾರ ನಿಧನರಾದ ಕಲಬುರಗಿ ಜಿಲ್ಲಾ ಬಣಗಾರ ಸಮಾಜದ ಮಾಜಿ ಅಧ್ಯಕ್ಷ ಅಶೋಕ ದೊಡ್ಡಮನಿ ಅವರಿಗೆ ಸಂತಾಪ ಸೂಚಿಸಿ, ಒಂದು ನಿಮಿಷ ಮೌನಾಚರಿಸಲಾಯಿತು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago