ವಾಲ್ಮೀಕಿ ರಾಮಾಯಣ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ

0
10

ಶಹಾಬಾದ: ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆಯಾಗಿದೆ ಎಂದು ಶಿವಕುಮಾರ ನಾಟೇಕಾರ ಹೇಳಿದರು.

ಅವರು ರವಿವಾರ ನಗರದ ಹಳೆಶಹಾಬಾದ ವಾಲ್ಮೀಕಿ ವೃತ್ತದಲ್ಲಿ ಆಯೋಜಿಸಲಾದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಾಲ್ಮೀಕಿ ರಾಮಾಯಣ ದೇಶ-ಭಾμÉಗೆ ಸೀಮಿತಗೊಳ್ಳದೆ ಜಾಗತಿಕವಾಗಿ ಆರಾಧಿಸಲ್ಪಟ್ಟಿದೆ.ಜನಸಮುದಾಯದ ಎಲ್ಲ ಸಮಸ್ಯೆಗಳು, ಸಂಕಟಗಳು, ಸವಾಲುಗಳಿಗೆ ವಾಲ್ಮೀಕಿ ರಾಮಾಯಣದಲ್ಲಿ ಉತ್ತರ ಸಿಗುತ್ತದೆ. ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ನಾವು ಕಲಿಯಬಹುದಾಗಿದೆ ಎಂದು ಹೇಳಿದರು.

Contact Your\'s Advertisement; 9902492681

ಹಿರಿಯರಾದ ದೇವೆಂದ್ರಪ್ಪ ಹೊನಗುಂಟಿ, ನಗರಸಭೆಯ ಸದಸ್ಯರಾದ ಜಗದೇವ ಸುಬೇದಾರ,ತಿಪ್ಪಣ್ಣ ನಾಟೇಕಾರ, ಅಣ್ಣಾರಾಯ ಹುಗ್ಗಿ, ಯಂಕಣ್ಣ ಸುಬೇದಾರ, ಮಹಾಂತೇಶ ಸುಬೇದಾರ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here