ಅಫಜಲಪುರ: ಪ್ರಾಥಮಿಕ ಆರೋಗ್ಯ ಕೇಂದ್ರ ಗೊಬ್ಬುರ್ ಬೀದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಆಚರಿಸಲಾಯಿತು.
ಒತ್ತಡದ ಜೀವನವೇ ಮಾನಸಿಕ ರೋಗಕ್ಕೆ ಮುಖ್ಯ ಕಾರಣವಾಗಿದೆ. ಇಂದು ನೂರರಲ್ಲಿ ಒಬ್ಬರು ಮಾನಸಿಕ ರೋಗಿಗಳು ಇದ್ದಾರೆ ಎಂದು ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಬಳೆ ಸಾರ್ವಜನಿಕರನ್ನು ಕುರಿತು ಮಾತನಾಡುತ್ತಾ ಮಾನಸಿಕ ರೋಗದ ಲಕ್ಷಣಗಳು, ತಡೆಗಟ್ಟುವಿಕೆ, ತಾಲೂಕು ಮತ್ತು ಜಿಲ್ಲೆಗಳಲ್ಲಿ ಇದಕ್ಕೆ ಉಚಿತವಾಗಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಇದನ್ನು ಅಲಕ್ಷಿಸದೆ ಪ್ರಾರಂಭಿಕ ಹಂತದಲ್ಲಿ ಗುರುತಿಸಿ ವಾಸಿ ಮಾಡಬಹುದಾಗಿದೆ. ಆಧುನಿಕ ಯುಗದಲ್ಲಿ ಮಾನಸಿಕ ರೋಗ ಹೆಚ್ಚುತ್ತಿದ್ದು ಅದಕ್ಕೆ ಯಾರು ಮೂಢನಂಬಿಕೆಗೆ ಗ್ರಾಮೀಣ ಪ್ರದೇಶದಲ್ಲಿ ಒಳಗಾಗದೆ ಸೂಕ್ತ ಚಿಕಿತ್ಸೆ ಪಡೆಯಲು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಆಯುಷ್ಯ ವೈದ್ಯಾಧಿಕಾರಿಗಳಾದ ಡಾ. ದೇವರಾಜ್ ಪ್ರಸಾದ್, ಡಾಕ್ಟರ್ ಜ್ಯೋತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಯ್ಯದ್ ಆಸ್ಮಿ, ಆರ್ ಕೆ ಎಸ್ ಕೆ ಆಪ್ತಸಮಾಲೋಚಕರಾದ ಸುಧಾಕರ್ ಎನ್, ಉಷಾ, ರಾಜು ಡಿ, ಅಂಜುಮ್, ಆಶಾ, ಮಲ್ಲಮ್ಮ, ಹಾಗೂ ವಿವಿಧ ಗ್ರಾಮದಿಂದ ಬಂದ ಗ್ರಾಮಸ್ಥರು ಭಾಗವಹಿಸಿದ್ದರು.
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…