ಸಿಪಿಐ ಶ್ರೀಮಂತ ಇಲ್ಲಾಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

0
54

ಬೆಂಗಳೂರು: ಮಹಾರಾಷ್ಟ್ರ ದಲ್ಲಿ ಗಾಂಜಾ ದಂಧೆಕೋರರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಕಲಬುರಗಿ ಗ್ರಾಮೀಣ ಸಿಪಿಐ ಶ್ರೀಮಂತ ಇಲ್ಲಾಳ  ಹಾಗೂ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಉಪಸಭಾಪತಿಯಾದ ಆನಂದ್ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಈ ವೇಳೆ ಮಾತನಾಡಿದ ಸಚಿವ ನಿರಾಣಿಯವರು, ಶ್ರೀಮಂತ ಇಲ್ಲಾಳ ಹಾಗೂ ಗೌರವಾನ್ವಿತ ಉಪ ಸಭಾಪತಿಯಾದ ಶ್ರೀ ಆನಂದ್  ಮಾಮನಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಇಬ್ಬರೂ ಕೂಡ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಆದಷ್ಟು ಬೇಗ ಗುಣಮುಖರಾಗಿ ಕರ್ತವ್ಯಕ್ಕೆ ಪುನಃ ಹಾಜರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here