ಕಲಬುರಗಿ: ಎಸ್.ಟಿ ಮೀಸಲಾತಿ ಪ್ರಮಾಣ 3 ರಿಂದ7ರವರೆಗೆ ಹೆಚ್ಚಿಸಿದ ನಂತರವು ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ ಆದ್ದರಿಂದ ಮುಂದಿನ ಹೋರಾಟದ ಕುರಿತು 16 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಪೂರ್ವ ಭಾವಿ ಸಭೆ ಕರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ತಳವಾರ ಎಸ್.ಟಿ ಹೋರಾಟ ಸಮಿತಿಯ ರಾಜ್ಯಧ್ಯಕ್ಷರಾದ ಡಾ. ಸರ್ದಾರ ರಾಯಪ್ಪ ಪತ್ರಿಕಾ ಪ್ರಕಟಣೆಯ ಮುಖಾಂತರ ತಿಳಿಸಿದ್ದಾರೆ.
ತಳವಾರರು ಕೂಡ ಜನರೇ, ತಳವಾರರು ಕೂಡ ಈ ದೇಶದ ಪ್ರಜೆಗಳೇ ತಳವಾರ ಬೇಡಿಕೆ ಸಂಕಲ್ಪಗಳನ್ನು ಈಡೇರಿಸದೆ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಕೈಗೊಂಡಿದ್ದಾರೆ. ಸಿಂದಗಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗಳಲ್ಲಿ ಹಾಗೂ ಕಲ್ಬುರ್ಗಿಯ ಪತ್ರಕರ್ತರ ಸಮ್ಮೇಳನದಲ್ಲಿ 48 ಗಂಟೆಗಳಲ್ಲಿ ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡುತ್ತೇನೆ ಎಂದು ಸಂಕಲ್ಪ ಮಾಡಿದ್ದ ಇನ್ನೂ ಪ್ರಮಾಣ ಪತ್ರ ನೀಡಿಲ್ಲ. ಆದ್ದರಿಂದ ಅದು ಜನ ಸಂಕಲ್ಪ ಯಾತ್ರೆ ಅಲ್ಲ, ನಿಮ್ಮ ಪಕ್ಷದ ಪ್ರಚಾರ ಯಾತ್ರೆವಾಗಿದೆ ಎಂದು ಟೀಕಿಸಿದ್ದಾರೆ.
ಜನರ ಸಂಕಲ್ಪ ಈಡೇರಿಸದೆ ಅದು ಹೇಗೆ ನೀವು ಜನ ಸಂಕಲ್ಪ ಯಾತ್ರೆ ಎನ್ನುತ್ತಿರುವಿರಿ? ಬದಲಾಗಿ ಅದು ನಿಮ್ಮ ಸುಳ್ಳಿನ ಸಂಕಲ್ಪ ಯಾತ್ರೆ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಮತ್ತು ಸಚಿವರು, ಸುಳ್ಳಿನ ಸಂಕಲ್ಪ ಯಾತ್ರೆ ಹಾಕಿಕೊಂಡು ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.
ಹಿಂದೂಳಿದ ಜಾತಿಗಳ ಪ್ರವಗ೯-1ರ ಪಟ್ಟಿಯಲ್ಲಿ ಇರುವ ತಳವಾರ ತೆಗೆದು ಹಾಕಿ ಸಮಾಜದವರಿಗೆ ಎಸ್.ಟಿ ಜಾತಿ ಪ್ರಮಾಣ ಪತ್ರ ನೀಡುವವರಿಗೆ ನಿರಂತರವಾಗಿ ಹೋರಾಟಗಳು ಮುಂದುವರೆಸಲಾಗುವುದು, ಮುಂದಿನ ಹೋರಾಟದ ಸಿದ್ಧತೆಗಳನ್ನು ಮಾಡಿಕೊಳ್ಳಲು ನಗರದ ಓಜಾ ಲೇಔಟಿನಲ್ಲಿರುವ ಕೋಲಿ ಭವನದಲ್ಲಿ 16 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಸಭೆ ಕರೆಯಲಾಗಿದೆ.
ಈ ಸಭೆಗೆ ಸಮಾಜದ ಬುದ್ಧಿಜೀವಿಗಳು, ಹಿರಿಯ ಮುಖಂಡರು, ಯುವ ಮುಖಂಡರು, ನೌಕರರು ಜನಸಾಮಾನ್ಯರೆಲ್ಲರೂ ಪಕ್ಷಬೇಧ ವಿಲ್ಲದೆ ಹಾಜರೆ ಆಗಬೇಕೆಂದು ಡಾ. ಸರ್ದಾರ ರಾಯಪ್ಪ ಮನವಿ ಮಾಡಿದ್ದಾರೆ.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…