ಕುಲಸಚಿವರಾಗಿ ಅಧಿಕಾರ ಸ್ವೀಕಾರ ನಾಳೆ

0
82

ಕಲಬುರಗಿ: ಕೆಎಎಸ್‍ಕಿರಿಯ ಶ್ರೇಣಿಯ ಅಧಿಕಾರಿ ಸ್ಥಳ ನಿರೀಕ್ಷೆಯಣೆಯಲ್ಲಿದ್ದ ಡಾ. ಬಿ.ಶರಣಪ್ಪ ಸತ್ಯಂಪೇಟೆಯವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಸ್ಥಳ ನಿಯುಕ್ತಿಗೊಳಿಸಿ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ. ಡಾ. ಬಿ. ಶರಣಪ್ಪಅವರು ಬುಧವಾರಅಧಿಕಾರ ಸ್ವೀಕರಿಸಲಿದ್ದಾರೆ.

ಗುಲ್ಬರ್ಗ ವಿವಿಯಕನ್ನಡಅಧ್ಯಯನ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಪದವಿ ಪಡೆದಿರುವ ಸತ್ಯಂಪೇಟೆಯವರು, ಈ ಮುಂಚೆ ಕಲಬುರಗಿ, ಯಾದಗಿರಿ, ಬೀದರ್ ತಹಸೀಲ್ದಾರ್ ಆಗಿ, ಬಾಗಲಕೋಟೆ, ಕೋಲಾರಜಿಲ್ಲೆಯಲ್ಲಿ ಭೂ ಸ್ವಾಧೀನ ಹಾಗೂ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here