ಮಾನವೀಯ ಸಂಬಂಧ ಗಟ್ಟಿಯಾಗಲಿ: ಬಸವರಾಜ ಪಾಟೀಲ ಸೇಡಂ

ಕಲಬುರಗಿ: ಇಂದಿನ ಪರಿಸ್ಥಿತಿಯಲ್ಲಿ ಮಾನವರ ಮಧ್ಯ ಸಂಬಂಧಗಳು ಬಿರುಕು ಮೂಡುತ್ತಿವೆ. ಈ ದಿಸೆಯಲ್ಲಿ ಪ್ರತಿಯೊಬ್ಬರಲ್ಲಿ ಮಾನವೀಯ ಸಂಬಂಧಗಳು ಗಟ್ಟಿಗೊಂಡಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಹೇಳಿದರು.

ಇಲ್ಲಿನ ಸಂಘದ ಅರಿವಿನ ಮನೆ ಸಭಾಂಗಣದಲ್ಲಿ ಸಂಘದ ಆಶ್ರಯದಲ್ಲಿ ಮಂಗಳವಾರ ನಡೆದ ಮಹಿಳೆಯರಿಗಾಗಿ ಮನೆ ಮದ್ದು ಹಾಗೂ ಮಾನವೀಯ ಸಂಬಂಧಗಳ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ವಿಶೇಷವಾಗಿ ಮಹಿಳೆಯರು ತಮ್ಮನ್ನು ತಾವು ಪರಸ್ಪರ ಗೌರವಿಸುವುದು ಕಲಿಯಬೇಕು. ಸಕಾರಾತ್ಮಕ ಚಿಂತನೆ, ಆಲೋಚನೆ ಮಾಡಿಕೊಂಡು ನೆಮ್ಮದಿಯ ಬದುಕು ಸಾಗಿಸಬೇಕು ಎಂದು ಕಿವಿಮಾತು ಹೇಳಿದರು.

ಏಳು ಜಿಲ್ಲೆಗಳಲ್ಲಿ ಇದುವರೆಗೆ 25 ಸಾವಿರ ಮಹಿಳೆಯರಿಗೆ ತರಬೇತಿ ನೀಡಲಾಗಿದ್ದು, 45 ಸಾಂಸ್ಕೃತಿಕ ಭವನ ನಿರ್ಮಾಣ, 1509 ಕೌಶಲ್ಯ ಕೇಂದ್ರ,4885 ಪ್ರಗತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. -ಲೀಲಾ ಕಾರಟಗಿ, ಅಧ್ಯಕ್ಷೆ, ಶಿಕ್ಷಣ ಸಮಿತಿ.

ಶಿಕ್ಷಣ ಉಪಸಮಿತಿ ಅಧ್ಯಕ್ಷೆ ಲೀಲಾ ಕಾರಟಗಿ ಮಾತನಾಡಿ, ಹೆಣ್ಣು ದೈವಿಸ್ವರೂಪಳು, ಹೆಣ್ತನಕ್ಕೆ ತ್ಯಾಗ ಮಾಡುವ ಗುಣವಿದೆ. ಈ ದಿಸೆಯಲ್ಲಿ ಜೀವನದಲ್ಲಿ ಪ್ರೀತಿಸುವದು ಕಲಿಯಬೇಕು. ಯಾರೊಂದಿಗೂ ಹೋಲಿಕೆ‌ ಮಾಡಿಕೊಳ್ಳಬಾರದು. ಸಹನಶೀಲತೆ, ತಾಳ್ಮೆಯಿಂದ ಇರಬೇಕು ಎಂದು ಸಲಹೆ ನೀಡಿದರು. ಇದೇ ವೇಳೆಗೆ ನಮ್ಮ ಅಡುಗೆ ಮನೆಯಲ್ಲೇ ಸಿಗುವ ಪದಾರ್ಥಗಳಿಂದ ಸಾಮಾನ್ಯ ಕಾಯಿಲೆ ಗುಣಪಡಿಸಿಕೊಳ್ಳುವ ತಾಕತ್ತಿದೆ ಎಂದು ಉಪನ್ಯಾಸ ನೀಡಿದರು.

ಆಯುರ್ವೇದ ವೈದ್ಯೆ ಡಾ. ನಿರ್ಮಲಾ ಕೆಳಮನಿ ವಿಶೇಷ ಉಪನ್ಯಾಸ ನೀಡಿದರು. ವೇದಿಕೆ ಮೇಲೆ ಸಂಘದ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗಳ್ಳಿ, ಕಾರ್ಯದರ್ಶಿ ಮಲ್ಲಿಕಾರ್ಜುನ, ಕೃಷಿ ಸಮಿತಿ ಅಧ್ಯಕ್ಷ ವ್ಹಿ. ಶಾಂತರೆಡ್ಡಿ, ಆಡಳಿತ ಮಂಡಳಿ ಸದಸ್ಯರಾದ ತಿಪ್ಪಣ್ಣ ರಡ್ಡಿ ಕೋಲಿ, ಪ್ರಭುದೇವ ಕಪ್ಪಗಲ್, ಶೃತಿ ಮತ್ತಿತರರಿದ್ದರು. ವಿಶೇಷ ಕರ್ತವ್ಯ ಅಧಿಕಾರಿ ಶೈಲಜಾ ಶೆಳ್ಳಗಿ ಸ್ವಾಗತಿಸಿದರು. ಶ್ವೇತಾ ಪ್ರಾಸ್ತಾವಿಕ ವಾಗಿ ಮಾತನಾಡಿದರು. ತಾಲೂಕು ಸಂಯೋಜಕಿ ಶೈಲಜಾ ಪಾಟೀಲ ಪ್ರಾರ್ಥನೆ ಗೀತೆ ಹಾಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಯು. ಭೀಮರಾವ, ಸುಧಾಕರ ದೊಡ್ಡಮನಿ, ಅರ್ಚನಾ, ನಾಗರಾಜ ಕೋರವಾರ, ಸಂಗಪ್ಪ ಪಾಟೀಲ, ಮಲ್ಲಿಕಾರ್ಜುನ ಆಲೂರ, ಉಜ್ವಲಾ ಶ್ರೀಮಂತ, ಹುಸೇನಿ ಪಾಳಾ, ರಾಹುಲ್, ಲೋಕೇಶ ಚಿನ್ನಾ, ಮತ್ತಿರರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420