ಕಲಬುರಗಿ: ವಿಭಿನ್ನ ಮತ್ತು ವೈವಿದ್ಮಮಯ ಕಾರ್ಯಕ್ರಮಗಳಿಗೆ ಹೆಸರುವಾಸಿಯಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದಿನ ಉದಯೋನ್ಮುಖ ಕವಿಗಳಿಗೆ ಕಾವ್ಯ ರಚನೆ ಮತ್ತು ಕಾವ್ಯ ಪರಂಪರೆ ತಿಳಿಸುವ ನಿಟ್ಟಿನಲ್ಲಿ ಒಂದು ದಿನದ ಕಾವ್ಯ ಕಮ್ಮಟ-2022 ನ್ನು ಅ.16 ರಂದು ಬೆಳಗ್ಗೆ 10.15 ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರಣೆ ನೀಡಿದ ತೇಗಲತಿಪ್ಪಿ, ಕಲ್ಯಾಣ ಕರ್ನಾಟಕ ಪ್ರತಿಭಾನ್ವಿತರ ನಾಡು. ಇಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಅವರಿಗೆ ಅವಕಾಶಗಳು ಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಇತ್ತೀಚಿನ ದಿನಗಳಲ್ಲಿ ಅನೇಕ ಹೊಸ ಕವಿಗಳು, ಬರಹಗಾರರು ಅನೇಕ ಪುಸ್ತಕಗಳನ್ನು ಪ್ರಕಟ ಮಾಡುತ್ತಿರುವುದು ಸಾಹಿತ್ಯಿಕವಾಗಿ ಉತ್ತಮ ಬೆಳವಣಿಗೆಯಾಗಿದೆ. ಪ್ರಕಟವಾದ ಉದಯೋನ್ಮುಖ ಬರಹಗಾರರ ಪುಸ್ತಕಗಳಲ್ಲಿ ಹೆಚ್ಚಿನವು ಕವನ ಸಂಕಲನಗಳೇ ಆಗಿರುತ್ತವೆ ಎಂಬುದು ವಿಶೇಷ . ಅಂದರೆ ಬಹುತೇಕ ಹೊಸ ಕವಿಗಳ ಉದಯ ಕವನಗಳಿಂದಲೇ ಆಗುತ್ತದೆ.

ಆ ಉತ್ಸಾಹ ತುಂಬಿದ ಇಂದಿನ ಯುವ ಕವಿಗಳಿಗೆ ಬರಹ ಕೌಶಲ್ಯದ ಜತೆಗೆ ಕಾವ್ಯ ಸಾಹಿತ್ಯದ ಕುರಿತು ಅರಿವು ಮೂಡಿಸುವ ಪ್ರಯತ್ನವೇ ಕಾವ್ಯ ಕಮ್ಮಟದ ಉದ್ದೇಶವಾಗಿದೆ. ಕವಿಗಳ ಕಾವ್ಯ ರಚನೆಯಲ್ಲಿ ವೈವಿಧ್ಯತೆ, ಶೈಲಿ, ರಚನಾ ಕ್ರಮದ ರೀತಿಯಲ್ಲಿ ಸುಧಾರಣೆಯಾಗಿ ಉತ್ತಮ ರಸಭರಿತ ಕಾವ್ಯ ರಸ ಸಹೃದಯರಿಗೆ ತಲುಪಿದರೆ ಕಾವ್ಯ ಕಮ್ಮಟ ಸಾರ್ಥಕ ಎಂಬುದು ಪರಿಷತ್ತಿನ ಆಶಯವಾಗಿದೆ ಎಂದು ವಿವರಿಸಿದರು.

ಅಂದು ಬೆಳಗ್ಗೆ 10.15 ಕ್ಕೆ ಜರುಗಲಿರುವ ಕಾವ್ಯ ಕಮ್ಮಟ-2022 ನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಅನೇಕ ಗಣ್ಯರು ಉಪಸ್ಥಿತರಿರುವರು.

ಬೆಳಗ್ಗೆ 11.30 ಕ್ಕೆ ಇರುವಂತೆ ಎರೆಯುವೆ ಎಂಬ ಗೋಷ್ಠಿಯಲ್ಲಿ ಕಾವ್ಯ ಸ್ಪೂರ್ತಿ ವಿಷಯ ಕುರಿತು ಹಿರಿಯ ಸಾಹಿತಿ ಭಂಟನೂರ ಗುರುಶಾಂತಯ್ಯಾ, ಕಾವ್ಯ ಗರಿಮೆ ವಿಷಯದ ಕುರಿತು ಲೇಖಕ ಡಾ. ಕೆ.ಗಿರಿಮಲ್ಲ ಮತ್ತು ಕಾವ್ಯ ಸ್ವರೂಪ ವಿಷಯದ ಕುರಿತು ಲೇಖಕಿ ಕಾವ್ಯಶ್ರೀ ಮಹಾಗಾಂವಕರ್ ಅವರು ಮಾತನಾಡಲಿದ್ದಾರೆ. ಅನೇಕ ಸಾಹಿತ್ಯ ಪ್ರೇರಕರು ಉಪಸ್ಥಿತರಿರುವರು.

ಮಧ್ಯಾಹ್ನ 2.45 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸರಕಾರಿ ಶಿಕ್ಷಣ ಮಹಾವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಸಿದ್ರಾಮಯ್ಯಾ ಮಠ ಸಮಾರೋಪ ನುಡಗಳನ್ನಾಡಲಿದ್ದಾರೆ. ಅನೇಕ ಲೇಖಕರು ಉಪಸ್ಥಿತರಿರುವರು. ಕಾರ್ಯಕ್ರಮದ ಮಧ್ಯದಲ್ಲಿ ಅನೇಕ ಹಿರಿಯ ಮತ್ತು ಕಿರಿಯ ಕಲಾವಿದರು ಪ್ರಸಿದ್ಧ ಕನ್ನಡ ಗೀತೆಗಳ ಪ್ರಸ್ತುತಪಡಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ತತ್ವಪದ, ಜಾನಪದ, ವಿದ್ಯಾರ್ಥಿ, ಪೊಲೀಸ್ ಸಾಹಿತ್ಯ ಸಮಾವೇಶಗಳ ಜತೆಗೆ ಇನ್ನೂ ಅನೇಕ ವೈವಿದ್ಯಮಯ ಕಾರ್ಯಕ್ರಮಗಳ ರೂಪುರೇಷೆ ಹಾಕಿಕೊಂಡಿದ್ದೇವೆ. ಇವುಗಳನ್ನು ಅರ್ಥಪೂರ್ಣವಾಗಿ ಆಯೋಜಿಸಿ ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಸಮಾವೇಶ ಮಾಡುತ್ತೇವೆ. – ವಿಜಯಕುಮಾರ ಪಾಟೀಲ ತೇಗಲತಿಪ್ಪಿ. ಅಧ್ಯಕ್ಷ, ಜಿಲ್ಲಾ ಕಸಾಪ, ಕಲಬುರಗಿ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಯಶ್ವಂತರಾಯ ಅಷ್ಠಗಿ, ಡಾ. ಕೆ.ಗಿರಿಮಲ್ಲ, ಶಕುಂತಲಾ ಪಾಟೀಲ ಜಾವಳಿ, ಸಿದ್ಧಲಿಂಗ ಬಾಳಿ, ಶರಣಬಸವ ಜಂಗಿನಮ ಠ, ರಾಜೇಂದ್ರ ಮಾಡಬೂಳ, ನಾಗಣ್ಣಾ ರಾಂಪೂರೆ, ಸ್ನೇಹಲತಾ ಕಮಕನೂರ, ಶಿಲ್ಪಾ ಜೋಶಿ ಇತರರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420