ಬಿಸಿ ಬಿಸಿ ಸುದ್ದಿ

ಸುರಪುರ:ಭಾರತ ಜೋಡೋ ಅಂಗವಾಗಿ ಪೂರ್ವಭಾವಿ ಸಭೆ

ಸುರಪುರ: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೋ ಪಾದಯಾತ್ರೆಯ ಅಂಗವಾಗಿ ನಗರದ ಕಾಂಗ್ರೆಸ್ ಕಚೇರಿ ವಸಂತ ಮಹಲ್‍ನಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಭಾರತ ದೇಶದಲ್ಲಿಯೇ ಇಂದು ಬಿಜೆಪಿಯಿಂದಾಗಿ ಜನರು ನೆಮ್ಮದಿಯಿಂದ ಇದಂತಾಗಿದೆ,ಒಂದೆಡೆ ಬೆಲೆ ಏರಿಕೆ,ಮತ್ತೊಂದೆಡೆ ನಿರುದ್ಯೋಗ ಸವiಸ್ಯೆ,ರಾಜ್ಯದಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ ಇವಲ್ಲವುಗಳಿಂದ ಜನರು ನಿತ್ಯವು ಈ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.ಇಂತಹ ಎಲ್ಲದಕ್ಕೂ ಅಂತ್ಯ ಕಾಣಬೇಕಾದರೆ ಜನರು ಕಾಂಗ್ರೆಸ್ ಸರಕಾರ ಬೇಕು ಎಂದು ಬಯಸುತ್ತಿದ್ಧಾರೆ.ಆದ್ದರಿಂದ ಇಂದು ದೇಶದಲ್ಲಿನ ಜನರಲ್ಲಿ ಈ ಸರಕಾರದ ದುರಾಡಳಿತ ಮತ್ತು ಜನವಿರೋಧಿ ನೀತಿಯನ್ನು ಜನಜಾಗೃತಿ ಮೂಡಿಸಲು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರು ಆರಂಭಿಸಿರುವ ಭಾರತ ಜೋಡೋ ಪಾದಯಾತ್ರೆಗೆ ನಾವೆಲ್ಲರು ಬೆಂಬಲಿಸಬೇಕಿದೆ,ಜೊತೆಗೆ ನಮ್ಮ ಕ್ಷೇತ್ರದಲ್ಲಿಯೂ ನಡೆಯುವ ಈ ಯಾತ್ರೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕಿದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್ ಮಾತನಾಡಿ,ಈಗಾಗಲೇ ಇಡೀ ದೇಶದ ಜನರಿಗೆ ಈ ಸರಕಾರ ಸಾಕಾಗಿದೆ,ಇದು ತೊಲಗಿದರೆ ಸಾಕು ಎನ್ನುವಂತಾಗಿದೆ,ಏಕೆಂದರೆ ಇಡೀ ದೇಶದ ಸರ್ವಜನರ ಹಿತ ಕಾಪಾಡುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಆರಿಸಿ ತರಲು ಜನರು ಮನಸ್ಸು ಮಾಡಿದ್ದಾರೆ.ಜೊತೆಗೆ ರಾಹುಲ್ ಗಾಂಧಿಯವರು ಕೂಡ ಇಂದು ದೇಶದ ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಅವರ ಬಳಿಗೆ ಬಂದು ಅವರ ನೋವುಗಳನ್ನು ಕೇಳುವ ಕೆಲಸ ಮಾಡುತ್ತಿದ್ದಾರೆ.ಅಂತಹ ಜನ ನಾಯಕ ನಮಗೆ ಬೇಕಿದೆ,ಅವರನ್ನು ಬೆಂಬಲಿಸಬೇಕಿ.ಆದ್ದರಿಂದ ತಾವೆಲ್ಲರೂ ಈಗ ನಡೆಯುತ್ತಿರು ಭಾರತ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರಾದ ನಿಂಗಣ್ಣ ಬಾಚಿಮಟ್ಟಿ,ಮಾನಪ್ಪ ಸೂಗುರು,ಅಹ್ಮದ್ ಪಠಾಣ್,ವೆಂಟಕೇಶ ಬೇಟೆಗಾರ ಸೇರಿದಂತೆ ಅನೇಕರು ಮಾತನಾಡಿದರು.ಸಭೆಯಲ್ಲಿ,ಮುಖಂಡರಾದ ರಾಜಾ ವೇಣುಗೋಪಾಲ ನಾಯಕ,ವಿಠ್ಠಲ್ ಯಾದವ್,ವೆಂಕೋಬ ಯಾದವ್,ಮಲ್ಲಣ್ಣ ಸಾಹುಕಾರ ಮುಧೋಳ,ಭಂಡಾರೆಪ್ಪ ನಾಟೇಕಾರ್,ರಮೇಶ ದೊರೆ ಆಲ್ದಾಳ,ರಾಜಾ ಪಿಡ್ಡನಾಯಕ (ತಾತಾ),ಸುವರ್ಣ ಎಲಿಗಾರ, ಭೀಮರಾಯ ಮೂಲಿಮನಿ,ಗುಂಡಪ್ಪ ಸೋಲಾಪುರ,ದೇವಿಂದ್ರ ಮುದನೂರ,ಅಬ್ದುಲ್ ಗಫೂರ ನಗನೂರಿ,ನಾಸೀರ ಕುಂಡಾಲೆ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

45 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago