ಕಲಬುರಗಿ: 70 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ದಲಿತ ಮತ್ತು ಅಲ್ಪಸಂಖ್ಯಾತರನ್ನು ಕೇವಲ ಓಟ್ಬ್ಯಾಂಕ್ ಆಗಿ ಬಳಸಿಕೊಂಡು ಈಗ ಡಬಲ್ಗೇಮ್ ಮಾಡುತ್ತಿದ್ದಾರೆ ಇದು ಬಿಡಬೇಕೆಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ ಹಿಂದೂತ್ವಪರ ಹೌದು, ಇಲ್ಲಿರುವ ಬಡವರಿಗೆ ಮೀಸಲಾತಿ ಸಿಗಲಿ ಎನ್ನುವುದು ನಮ್ಮ ನಿಲುವು ಎಂದು ಈಶ್ವರಪ್ಪ ವೀರಶೈವ ಲಿಂಗಾಯತರನ್ನು ಒಡೆದಿದ್ದು ಯಾರು ಎಂದು ಪ್ರಶ್ನಿಸುವ ಮೂಲಕ ಶ್ರೀಮಂತರಿಗಿರುವ ಮೀಸಲಾತಿ ತಗೆಯಬೇಕು ಅನ್ನೋದು ನನ್ನ ವೈಯಕ್ತಿ ಬೇಡಿಕೆ ಎಂದರು.
ಕುಲಶಾಸ್ತ್ರ ಅಧ್ಯಯನ ಪ್ರಕಾರ ಅತ್ಯಂತ ಹಿಂದುಳಿದವರಿಗೆ ಮೀಸಲಾತಿ ಸಿಗಬೇಕು, ಜೊತೆಗೆ ಅಲ್ಪಸಂಖ್ಯಾತ ಮೀಸಲಾತಿಯಿಂದ ಮುಸಲ್ಮಾನರನ್ನು ತೆಗೆಯುವ ವಿಚಾರ ಕುಲಶಾಸ್ತ್ರೀಯ ವರದಿಯ ಪ್ರಕಾರ ಮುಂದಿನ ಕ್ರಮವಾಗಲಿದೆ ಎಂದರು.
ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿರುವ ಸರಕಾರದ ಕ್ರಮ ಸಂವಿಧಾನ ಬದ್ದನಾ? ಎಂದು ಟಿಕಿಸಿದ ಸಿದ್ದರಾಮಯ್ಯನವರು ಸರ್ವಪಕ್ಷ ಸಭೆಯಲ್ಲಿಯೇ ಈ ಕುರಿತು ಚರ್ಚೆ ನಡೆಸಬೇಕಿತ್ತು ಸಭೆಯಿಂದ ಹೊರಹೋಗಿ ಈ ರೀತಿ ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ ಎಂದು ತಿವಿದರು.
ಚುನಾವಣೆಗೋಸ್ಕರ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪ ತಳ್ಳಿಹಾಕಿದ ಈಶ್ವರಪ್ಪ ಗೊಂದಲ ಸೃಷ್ಟಿ ಕಾಂಗ್ರೆಸ್ ಮಾಡುತ್ತಿದೆ, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಓಟ್ಬ್ಯಾಂಕ್ ಮಾಡಿಕೊಂಡಿದೆ ಎಂದರು.
ಸಚಿವ ಸಂಪುಟ ವಿಸ್ತರಣೆಯ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರೀಯೆ ನೀಡಿದ ಅವರು, ಅದು ವರಿಷ್ಟರಿಗೆ ಬಿಟ್ಟ ವಿಚಾರ, ಅವರು ಬಯಸಿದರೆ ವಿಸ್ತರಿಸಬಹುದು ಅಥವಾ ಬಿಡಬಹುದು, ಆದರೆ ನನ್ನ ಮೇಲೆ ಷಡ್ಯಂತ್ರ ಮಾಡಿ ನನ್ನ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಗರಂ ಆದ ಅವರು, ತಮಗೆ ಸಚಿವಸ್ಥಾನ ಪುನಃ ನೀಡದಕ್ಕೆ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…