ಅಂಗವಿಕಲರನ್ನು ಸಮಾಜವು ಗೌರವದಿಂದ ಕಾಣಬೇಕು: ಅಂಜಲಿ ಕಂಬಾನೂರ

ಶಹಾಬಾದ: ಅಂಗವಿಕಲತೆ ಶಾಪವಲ್ಲ. ಅಂಗವೈಕಲ್ಯದಿಂದ ಬಳಲುತ್ತಿರುವವರನ್ನು ಸಮಾಜವು ಗೌರವದಿಂದ ಕಾಣಬೇಕಿದೆ ಎಂದು ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಹೇಳಿದರು.

ಅವರು ರವಿವಾರ ನಗರದ ಸಹರಾ ಫಂಕ್ಷನ್ ಹಾಲನಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರಗಿ ಹಾಗೂ ಶ್ರೀಯಾನ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ವಿಕಲಚೇತನರಿಗೆ ಸಾಧನ ಸಲಕರಣೆಗಾಗಿ ಮೌಲ್ಯ ಮಾಪನ ಹಾಗೂ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಅಂಗವಿಕಲರಿಗೆ ಬೇಕಾಗಿರುವುದು ಅನುಕಂಪವಲ್ಲ ಅವಕಾಶ.ಅಂಗವಿಕಲರು ಅಸಹಾಯಕರಲ್ಲ.ಅವರಿಗೆ ಸರಕಾರದಿಂದ ಅಗತ್ಯ ಸೌಲಭ್ಯ ಕಲ್ಪಿಸಿದಲ್ಲಿ ಸದೃಢರಿಗಿಂತಲೂ ಹೆಚ್ಚಿನದನ್ನು ಸಾಧಿಸಿ ತೋರುವ ಸಾಮಥ್ರ್ಯವಿದೆ.ಎಲ್ಲಾ ಇದ್ದು ಏನು ಮಾಡದೇ ಇರುವವರು ನಿಜವಾದ ಅಂಗವೈಕಲ್ಯರು.ದೇಹದ ಒಂದು ಕಳೆದುಕೊಂಡರು ಏನಾದರೂ ಮಾಡುವೆನೆಂಬ ತುಡಿತಕ್ಕೆ ಸಮಾಜ ಹಾಗೂ ಸರಕಾರ ಬೆಂಬಲ ನೀಡಿದರೆ ಅದ್ಭುತ ಬದಲಾವಣೆಯನ್ನು ಕಾಣಬಹುದು. ಒಂದು ಸರಕಾರ ಮಾಡದಂಥ ಸಾಧನೆಯನ್ನು ಪಂಡಿತ್ ಗವಾಯಿಗಳು ಮಾಡಿದ್ದಾರೆ. ಅವರ ಸಾಧನೆಯು ಅಂಗವಿಕಲರಿಗೆ ಸ್ಪೂರ್ತಿಯ ಸೆಲೆಯಾಗಬೇಕು. ಸಮಾಜದಲ್ಲಿ ಅಂಗವಿಕಲರನ್ನು ನೋಡುವ ಮನೋಭಾವ ಬದಲಾಗಬೇಕು. ಅವರಿಗೂ ಅವಕಾಶ ಕಲ್ಪಿಸಬೇಕು ಆಗ ಮಾತ್ರ ಅವರ ಸಾಧನೆ ತೋರಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಮಾತನಾಡಿ, ಪ್ರತಿ ಅಂಗವಿಕಲ ವ್ಯಕ್ತಿ /ಮಗುವಿನ ಅವಶ್ಯಕತೆಗೆ ಪೂರಕವಾದ ಯೋಜನೆ ರೂಪಿಸಬೇಕು. ಎಲ್ಲರಿಗೂ ಒಂದೇ ರೀತಿಯ ವ್ಹೀಲ್ಚೇರ್, ಪರಿಕರ ನೀಡಿದರೆ ಆಗದು.ಅಂಗವಿಕಲ ವ್ಯಕ್ತಿಗಳ ಅವಶ್ಯಕತೆಗೆ ಅನುಗುಣವಾದ ಕಾರ್ಯಕ್ರಮಗಳ ಅನುμÁ್ಠನ ಕುರಿತು ಚಿಂತನೆ ಆಗಬೇಕಿದೆ ಎಂದರು. ಶ್ರೀಯಾನ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ರಾಜು ಶಾಖಾಪೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ. ಸ್ವಪ್ನಿಲ ಕಲ್ಲೂರಕರ, ನಗರ ಸಭೆಯ ಮಾಜಿ ಸದಸ್ಯ ನರಸಿಂಹಲು ರಾಯಚೂರಕರ, ಹರಿಕೃಷ್ಣ, ಪತ್ರಕರ್ತ ಲೋಹಿತ್ ಕಟ್ಟಿ, ಅಂಬರೀಶ ನಾಯಕ ವೇದಿಕೆ ಮೇಲೆ ಇದ್ದರು.

ಶಿಬಿರದಲ್ಲಿ 125 ಜನ ಅಂಗವಿಕಲರ ಮೌಲ್ಯಮಾಪನ ನೊಂದಣಿ ಮಾಡಿ ಜಿಲ್ಲಾ ಕಲ್ಯಾಣಾಧಿಕಾರಿಗಳಿಗೆ ಒಪ್ಪಿಸಲಾಯಿತು. ವಿಜಯಲಕ್ಷ್ಮಿ ಮಾಳಗಿ ಸ್ವಾಗತಿಸಿದರು, ಶಿವರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು, ನಾನಾಗೌಡ ಪಾಟೀಲ ನಿರೂಪಿಸಿ, ವಂದಿಸಿದರು.
ಶಿಬಿರದಲ್ಲಿ ವಿಜಯಲಕ್ಷ್ಮಿ, ದತ್ತು, ಕೃಷ್ಣ, ಮಾಹಾಂತೇಶ, ಮೋಹನ ಹಳ್ಳಿ, ಮಲ್ಲೇಶಿ ಭಜಂತ್ರಿ, ಯಲ್ಲಪ್ಪ ದಂಡಗುಳಕರ, ಶ್ರೀನಿವಾಸ, ಚಂದ್ರಶೇಖರ ಪಾಟೀಲ ಉಪಸ್ಥಿತರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420