ಕಲಬುರಗಿ: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ, ಖಾತೆ ಮಾಡಿಕೊಡುವುದು, ರೈತರ ಮೇಲಿನ ಭೂಕಬಳಿಕೆ ಕೇಸುಗಳನ್ನು ವಾಪಸ್ ತೆಗೆದುಕೊಳ್ಳುವುದು ಹಾಗೂ ಇನ್ನಿತರ ಹಕ್ಕೊತ್ತಾಯಗಳನ್ನು ಸಂಬಂಧಪಟ್ಟ ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆಹರಿಸಿಕೊಡಲಾಗುವುದು ಎಂದು ಸರ್ಕಾರದಅಧೀನ ಕಾರ್ಯದರ್ಶಿ ಎಐಕೆಕೆಎಂಎಸ್ ನಿಯೋಗಕ್ಕೆ ಭರವಸೆ ನೀಡಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿಜಮೀನನ್ನುಗುತ್ತಿಗೆಆಧಾರದಲ್ಲಿಕೊಡುವ ಸರ್ಕಾರದ ನಿರ್ಧಾರವನ್ನು ವಾಪಸ್ ಪಡೆಯಬೇಕು ಮತ್ತು ಬಗರ್ ಹುಕುಂ ಸಾಗುವಳಿದಾರಿಗೆ ಹಕ್ಕುಪತ್ರ ವಿತರಿಸಬೇಕುಎಂದು ಒತ್ತಾಯಿಸಿ ರಾಜ್ಯಮಟ್ಟದ ಹೋರಾಟದ ಭಾಗವಾಗಿವಿಧಾನಸೌಧ ಚಲೋ ಹೋರಾಟವನ್ನುಅಖಿಲ ಭಾರತರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್)ರಾಜ್ಯ ಸಮಿತಿಯು ಸಂಘಟಿಸಿತ್ತು.
“ಬಗರ್ ಹುಕುಂ ಸಾಗುವಳಿಯು ಭೂ ಕಬಳಿಕೆಯಲ್ಲ, ಬಂಡವಾಳಶಾಹಿಗಳು ಹಾಗೂ ಕಂಪೆನಿಗಳು ಭೂಮಿಯನ್ನು ಆಕ್ರಮಿಸಿಕೊಳ್ಳುವುದು ಭೂಕಬಳಿಕೆ.ಬಡರೈತರು ಭೂಮಿ ಕೇಳುವುದು ನೈತಿಕ ಹಕ್ಕು.ರೈತರುತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ. ಬಡರೈತರ ಪರವಾಗಿ ನಿಲ್ಲಬೇಕಾದುದು ಸರ್ಕಾರದಕರ್ತವ್ಯ” ಎಂದುಖ್ಯಾತ ಬಂಡಾಯ ಸಾಹಿತಿಅಲ್ಲಮಪ್ರಭು ಬೆಟ್ಟದೂರು ಬಗರ್ ಹುಕುಂ ಸಾಗುವಳಿದಾರರ ಹೋರಾಟದಲ್ಲಿ ರೈತರನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದರಾಜ್ಯಾಧ್ಯಕ್ಷ ಹೆಚ್.ವಿ.ದಿವಾಕರ್, ರಾಜ್ಯ ಕಾರ್ಯದರ್ಶಿಕೆ.ಉಮಾ, ಉಪಾಧ್ಯಕ್ಷಡಾ. ಟಿ.ಎಸ್.ಸುನೀತ್ಕುಮಾರ್ ಮಾತನಾಡಿ, ದಶಕಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಭೂಮಿಗೆ ಹಕ್ಕಪತ್ರವನ್ನು ನೀಡಬೇಕುಎಂದು ಆಗ್ರಹಿಸಿದರು.ಎಐಕೆಕೆಎಂಎಸ್ರಾಜ್ಯ ಕಾರ್ಯದರ್ಶಿ ಎಂ.ಶಶಿಧರ್ಅಧ್ಯಕ್ಷತೆ ವಹಿಸಿದ್ದರು.ಕಲಬುರಗಿಜಿಲ್ಲೆಯಿಂದಲೂ ನೂರಾರುಜನ ಸಾಗುವಳಿದಾರ ರೈತರು ಸಹ ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…