ಶಹಾಬಾದ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕನ್ನಡಿಗ ಹಾಗೂ ಕಲ್ಯಾಣ ಕರ್ನಾಟಕದ ಮುತ್ಸದಿ ರಾಜಕಾರಣಿ ಡಾ ಮಲ್ಲಿಕಾರ್ಜುನ ಖರ್ಗೆ ಗೆಲುವಿಗೆ ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ನೇತೃತ್ವದಲ್ಲಿ ಬುಧವಾರ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ ಮತ್ತು ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ರಶೀದ್ ಮರ್ಚಂಟ, ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಪ್ರಾಮಾಣಿಕತೆ,ಅವರ ಬದ್ಧತೆಗೆ ಸಂದ ಗೆಲುವು ಇದಾಗಿದೆ.ಅವರು ಶಾಸಕರಾಗಿ ಸಂಸದರು ಹಾಗೂ ರಾಜ್ಯ, ಕೇಂದ್ರ ಸರ್ಕಾರದಲ್ಲಿ ಮಂತ್ರಿಗಳಾಗಿ ದಶಕಗಳ ಕಾಲ ಆಡಳಿತ ನಡೆಸಿದ ಹಾಗೂ ವಿಧಾನಸಭೆ, ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿದವರು.
ವಿರೋಧ ಪಕ್ಷಗಳ ನಾಯಕರಿಂದಲೂ ಮೆಚ್ಚುಗೆ ಗಳಿಸಿರುವ ಮಲ್ಲಿಕಾರ್ಜುನ ಖರ್ಗೆ, ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾಗಿದ್ದ ವೇಳೆ ಕಾರ್ಮಿಕರ ಹಿತಕ್ಕಾಗಿ ಮಾಡಿದ ಯೋಜನೆಗಳು ಅದ್ವಿತೀಯವಾಗಿವೆ. ಜೊತೆಗೆ ಹೈದರಾಬಾದ್ ಕರ್ನಾಟಕಕ್ಕೆ 371 ಜೆ ವಿಶೇಷ ಸೌಲಭ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ಸುರಿಮಳೆಯನ್ನೇ ಕೇಂದ್ರ ಸುರಿಸುವಂತೆ ಮಾಡಿದವರಲ್ಲಿ ಖರ್ಗೆ ಪ್ರಮುಖರಾಗಿದ್ದಾರೆ ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದಕ್ಕೆ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ.
ಅಲ್ಲದೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠಗೊಳ್ಳಲಿದೆ ಎಂದರು.ವಿಜಯಕುಮಾರ ಮುಟ್ಟತ್ತಿ, ಮೃತ್ಯುಂಜಯ್ ಹಿರೇಮಠ, ಶರಣಗೌಡಪಾಟೀಲ ಗೋಳಾ(ಕೆ), ವಿಶ್ವರಾಧ್ಯ ಬೀರಾಳ, ಸಾಹೇಬಗೌಡ ಬೋಗುಂಡಿ,ಕುಮಾರ ಚವ್ಹಾಣ,ಕಿರಣ ಚವ್ಹಾಣ, ನಿಂಗಣ್ಣ ಪೂಜಾರಿ, ಮಾಣಿಕ್ ಗೌಡ, ರುದ್ರಗೌಡ,ಫಜಲ್ ಪಟೇಲ್, ಹಾಷಮ್ ಖಾನ, ಅನ್ವರ ಪಾಷಾ,ಮಲ್ಲಿಕಾರ್ಜುನ ವಾಲಿ, ದಿಲೀಪ್ ನಾಯಕ,ನಾಗರಾಜ ಸಿಂಘೆ, ಮುನ್ನಾ ಪಟೇಲ್,ಕೃಷ್ಣಪ್ಪ ಕರಣಿಕ್, ಡಾ.ಅಹ್ಮದ್ ಪಟೇಲ್, ನಾಗೇಂದ್ರ ನಾಟೇಕಾರ, ಶಿವಕುಮಾರ ನಾಟೇಕಾರ, ಇನಾಯತಖಾನ ಜಮಾದಾರ,ಮೇರಾಜ ಸಾಹೇಬ,ಮ.ರಫಿಕ್ ಕಾರೋಬಾರಿ,ಅಜೀಮ್ ಸೇಠ,ಮರಲಿಂಗ ಕಮರಡಗಿ, ಮೆಹಬೂಬ,ಮ.ಅಜರ್ ಬಾಕ್ರೋದ್ದಿನ್,ರಮೇಶ ಪವಾರ,ಸ್ನೇಹಲ್ ಜಾಯಿ,ಸೂರ್ಯಕಾಂತ ಕೋಬಾಳ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…