ಸುರಪುರ: ನಗರದ ಟೇಲರ್ಸ್ ಮಂಜಿಲ್ ಅತಿಥಿಗೃಹದಲ್ಲಿ ಜರುಗಿದ ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಸಭೆಯಲ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.
ತಾಲೂಕು ಘಟಕದ ಅಧ್ಯಕ್ಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಲ್ಲು ಹೊಸಮನಿ ಮಾತನಾಡಿ ಕನ್ನಡ ಸೇನೆ ಕರ್ನಾಟಕ ಸಂಘಟನೆಯು ಕನ್ನಡ ಭಾಷೆ,ನೆಲ,ಜಲ ಸೇರಿದಂತೆ ನಾಡಿನ ಯಾವುದೇ ವಿಷಯಗಳಲ್ಲಿ ರಾಜ್ಯದ ಹಿತಕ್ಕೆ ಧಕ್ಕೆ ಬಂದಲ್ಲಿ ಸದಾ ಹೋರಾಟಕ್ಕೆ ಸಿದ್ಧವಾಗಿದ್ದು ಅಲ್ಲದೆ ತಾಲೂಕಿನ ಜನರ, ರೈತರ ಯಾವುದೇ ಸಮಸ್ಯೆಗಳಿರಲಿ ಅದಕ್ಕೆ ಸ್ಪಂದಿಸಿ ಜನರ ಸಂಕಷ್ಟದಲ್ಲಿ ಪಾಲ್ಗೊಂಡು ಜನಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದು ಸಂಘಟನೆಯ ಪದಾಧಿಕಾರಿಗಳು ಸಂಘಟನೆಯ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ನಾಡಿನ ಹಿತ ಕಾಪಾಡುವ ಮೂಲಕ ರಾಜ್ಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಸಂಘಟನೆಯ ವಿವಿಧ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ವಾಸು ಕೆಂಗೂರಿ(ಗೌರವಾಧ್ಯಕ್ಷ), ಹುಸನಪ್ಪ ಜೀವಣಗಿ(ಉಪಾಧ್ಯಕ್ಷ), ಭಾಗನಾಥ ಗುತ್ತೇದಾರ(ಪ್ರಧಾನ ಕಾರ್ಯದರ್ಶಿ), ರವಿಚಂದ್ರ ಠಾಣಾಗುಂದಿ(ಸಹ ಕಾರ್ಯದರ್ಶಿ), ಲಕ್ಷ್ಮೀಕಾಂತ ರೂಢಿಯಾರ(ಸಂಘಟನಾ ಕಾರ್ಯದರ್ಶಿ), ರಾಮಕೃಷ್ಣ ನಾಯಕ(ಸಂಚಾಲಕ), ವಿಜಯಕುಮಾರ ಬಡಿಗೇರ(ಖಜಾಂಚಿ) ಹಾಗೂ ಶಿವರಾಜ ಹುಲಕಲ್ (ಮಾಧ್ಯಮ ಪ್ರತಿನಿಧಿ)ಯನ್ನಾಗಿ ನೇಮಕಗೊಳಿಸಿ ನೇಮಕಾತಿ ಪತ್ರವನ್ನು ವಿತರಿಸಲಾಯಿತು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…