ಬಿಸಿ ಬಿಸಿ ಸುದ್ದಿ

ರೈತರ, ಕಾರ್ಮಿಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಏಕೈಕ ನಾಯಕ ಮಾನ್ಪಡೆ: ಶೇಖಮ್ಮ

ಶಹಾಭಾದ: ಬಡವರ, ರೈತರ ಹಾಗೂ ಕಾರ್ಮಿಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದ ಏಕೈಕ ನಾಯಕರೆಂದರೆ ಮಾರುತಿ ಮಾನ್ಪಡೆ ಅವರು. ಅವರ ನಿಧನ ಮತ್ತು ಅವರು ಮಾಡಿದ ಹೋರಾಟ ಕಲ್ಯಾಣ ಕರ್ನಾಟಕದ ಹೋರಾಟಗಾರರಿಗೆ ಇಂದಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಚಿತ್ತಾಪೂರ ಸಿಐಟಿಯು ತಾಲೂಕಾಧ್ಯಕ್ಷೆ ಶೇಖಮ್ಮ ಕುರಿ ಹೇಳಿದರು.

ಅವರು ಗುರುವಾರ ನಗರದ ಸಿಪಿಐಎಮ್(ಎಮ್) ಕಚೇರಿಯಲ್ಲಿ ಆಯೋಜಿಸಲಾದ ಕಾಮ್ರೆಡ್ ಮಾರುತಿ ಮಾನ್ಪಡೆ ಅವರ ದ್ವಿತೀಯ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಳೆದ ಸುಮಾರು 30-35 ದಶಕಗಳಿಂದ ರಾಜ್ಯದ ಯಾವ ಮೂಲೆಯಲ್ಲಿಯೇ ಅನ್ಯಾಯ, ಅತ್ಯಾಚಾರ, ಮೋಸ ನಡೆದಿದ್ದರೂ ಇವುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮಾರುತಿ ಮಾನ್ಪಡೆ ಕಲ್ಯಾಣ ಕರ್ನಾಟಕದ ಹೋರಾಟದ ಧ್ವನಿಯಾಗಿದ್ದರು. ರೈತ, ಕೃಷಿ, ಕೂಲಿ, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿಭಟನೆ, ಹೋರಾಟ ಹಮ್ಮಿಕೊಳ್ಳುತ್ತಿದ್ದ ಇವರು ಒಬ್ಬ ಜನಪರ ಹೋರಾಟಗಾರರಾಗಿದ್ದರು ಎಂದು ಹೇಳಿದರು.

ಸಿಐಟಿಯು ಹಿರಿಯ ಮುಖಂಡ ಮಲ್ಲಣ್ಣ ಕಾರೊಳ್ಳಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾಧ್ಯಕ್ಷ ರಾಯಪ್ಪ ಹುರಮುಂಜಿ ಮಾತನಾಡಿ,ಅವರೊಬ್ಬ ನೊಂದವರ ಧ್ವನಿಯಾಗಿದ್ದರು. ಯಾವುದೇ ಸಮಸ್ಯೆಗಳಿಗೆ ಧುಮಿಕದರೂ, ಗುರಿ ಮುಟ್ಟುವ ತನಕ ಹಿಡಿದ ಹಠ ಬಿಡುತ್ತಿರಲಿಲ್ಲ. ಅನೇಕ ಬಾರಿ ಪೆÇಲೀಸರ ಲಾಠಿ ರುಚಿ ಕೂಡ ಉಂಡಿದ್ದರು. ಹೀಗೆ ಜನಪರ, ಜೀವಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಇವರು ತಾವು ನಂಬಿದ ತತ್ವ, ಸಿದ್ಧಾಂತಕ್ಕೆ ಸದಾ ಅಂಟಿಕೊಂಡಿರುತ್ತಿದ್ದರು. ಆ ತತ್ವ, ಸಿದ್ಧಾಂತಗಳಿಗೆ ಸ್ವಲ್ಪ ಕುಂದುಂಟಾದರೂ ಸಾಕು, ಅವರ ವಿರುದ್ಧ ಸೆಟೆದು ನಿಲ್ಲುತ್ತಿದ್ದರು. ಅವರ ಹಾಗೇ ನಾವು ಕೂಡ ಜನಪರವಾದ ಹೋರಾಟಕ್ಕಾಗಿ ಶ್ರಮಿಸಬೇಕಿದೆ ಎಂದರು.

ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ರಾಮು ಜಾಧವ, ಭೀಮಶಾ ಗೋಳಾ,ನಿಂಗಣ್ಣ ಇಂಗಳಗಿ, ವಿಶ್ವರಾಜ ಫಿರೋಜಾಬಾದ,ಸೇರಿದಂತೆ ಅನೇಕ ಕೂಲಿ ಕಾರ್ಮಿಕರು ಹಾಗೂ ಮಾನ್ಪಡೆ ಅಭಿಮಾನಿ ಬಳಗದವರು ಹಾಜರಿದ್ದರು.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

3 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

4 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

4 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

5 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

5 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

5 hours ago