ಬಿಸಿ ಬಿಸಿ ಸುದ್ದಿ

ಕಜಾಪದಿಂದ ಜಾನಪದ ನಡೆ-ಶಾಲೆಯೆಡೆ ವಿಶೇಷ ಕಾರ್ಯಕ್ರಮ

ಶಹಾಬಾದ:ಮಾನವೀಯತೆ, ಆಚಾರ-ವಿಚಾರ, ಸಂಸ್ಕಾರ, ಗುರು-ಹಿರಿಯರನ್ನು ಗೌರವಿಸುವದು, ಹೃದಯವಂತಿಕೆ, ದೇಶಪ್ರೇಮ ಸೇರಿದಂತೆ ಮುಂತಾದ ಮಾನವೀಯ, ಸಾಮಾಜಿಕ ಮತ್ತು ರಾಷ್ಟ್ರೀಯ ಮೌಲ್ಯಗಳನ್ನು ಹೊಂದಿರುವ ಜಾನಪದವು ಸಂಸ್ಕøತಿ, ಪರಂಪರೆಯ ತಾಯಿಬೇರಾಗಿದ್ದು, ಅದನ್ನು ಉಳಿಸಿ, ಮುಂದಿನ ಪೀಳಿಗೆಗೆ ಮುಟ್ಟಿಸುವ ಕಾರ್ಯವಾಗಬೇಕಾಗಿದೆ ಎಂದು ತಾಲೂಕಾ ಕಸಾಪ ಅಧ್ಯಕ್ಷ ಶರಣಬಸಪ್ಪ ಕೋಬಾಳ ಅಭಿಮತಪಟ್ಟರು.

ಅವರು ಬುಧವಾರ ಶ್ರೀಮತಿ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ‘ಕನ್ನಡ ಜಾನಪದ ಪರಿಷತ್’ನ ತಾಲೂಕಾ ಘಟಕದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ “ಜಾನಪದ ನಡೆ-ಶಾಲೆಯೆಡೆ” ಎಂಬ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗುವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ, ದೇಶದ ಭವ್ಯ ಸಂಸ್ಕøತಿ, ಪರಂಪರೆ ಉಳಿದಿದೆ ಎಂದರೆ, ಅದು ಜಾನಪದದಿಂದ ಮಾತ್ರ ಎಂಬುದು ಮರೆಯಬಾರದು. ವಿದೇಶಿ ಸಂಸ್ಕøತಿ ಬೇಡ. ದೇಶದ ಮೂಲ ಸಂಸ್ಕøತಿಯಾದ ಜಾನಪದ ಬದುಕಿನ ಅವಿಭಾಜ್ಯ ಅಂಗವಾಗಿಸಿಕೊಳ್ಳಿ. ಜಾನಪದ ಸಂಸ್ಕøತಿ ಪರಿಸರ, ನಿಸರ್ಗದೊಂದಿಗಿನ ಅವಿನಾಭಾವ ಹೊಂದಿದ್ದು, ಪ್ರಗತಿಕೆ ಪೂರಕವಾಗಿದೆ ಎಂದರು.

ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಮಾತನಾಡಿ, ಮಗು ಜನಿಸಿದಾಗ ಐದೇಶಿಯಿಂದ ಆರಂಭಗೊಂಡು, ವ್ಯಕ್ತಿಯ ಜೀವನದ ಕೊನೆಯವರೆಗೆ ವಿವಿಧ ಸಂಸ್ಕಾರಗಳನ್ನು ನೀಡಲಾಗುತ್ತದೆ. ಪ್ರತಿಯೊಂದು ಸಂಸ್ಕಾರಕ್ಕೆ ತನ್ನದೇ ಆದ ಹಿನ್ನಲೆ, ಅರ್ಥವನ್ನು ಒಳಗೊಂಡಿದೆ. ಆದರೆ ಪ್ರಸ್ತುತವಾಗಿ ಇಂತಹ ಆಚರಣೆಗಳು ಕಡಿಮೆಯಾಗುತ್ತವೆ. ಜಾನಪದ ಪರಂಪರೆಯನ್ನು ಎಲ್ಲೆಡೆ ಪಸರಿಸಬೇಕು ಎಂಬ ಉದ್ದೇಶದಿಂದ ನಮ್ಮ ಪರಿಷತ್ ನಿರಂತರವಾಗಿ ಕಾರ್ಯ ಮಾಡುತ್ತಿದೆ ಎಂದರು.

ಕಜಾಪ ಜಿಲ್ಲಾ ಕಾರ್ಯದರ್ಶಿ ಎಚ್.ಬಿ.ಪಾಟೀಲ, ಸಂಘಟನಾ ಕಾರ್ಯದರ್ಶಿ ಸಾಯಬಣ್ಣ ಹೋಳ್ಕರ್, ತಾಲೂಕಾಧ್ಯಕ್ಷ ರಾಜಶೇಖರ ದೇವರಮನಿ, ಶಾಲೆಯ ಮುಖ್ಯ ಶಿಕ್ಷಕಿ ದಾನಮ್ಮ ಎಂ.ಹಿರೇಮಠ, ಸಹ ಶಿಕ್ಷಕರಾದ ಆರತಿ ನಾಲವಾರ, ಪಾರ್ವತಿ ಚಟ್ಟಿ, ನಿರ್ಮಲಾ ಬಿರಾದಾರ, ಆರತಿ ವಿ., ಸುಜಾತಾ, ಸೌಮ್ಯ, ಉಜ್ಮಾ, ಪ್ರಮುಖರಾದ ಮಲ್ಲಿಕಾರ್ಜುನ ಎಂ., ವೀರೇಶ ಮೋರೆ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಾನಪದ ಗೀತೆಗಳನ್ನು ಹಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.

emedialine

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

20 mins ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

31 mins ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

34 mins ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

2 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

2 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

2 hours ago