ಬಿಸಿ ಬಿಸಿ ಸುದ್ದಿ

ಲೋಕ ಅದಾಲತ್ ಕುರಿತು ನ್ಯಾಯಾಧೀಶರ ಸುದ್ದಿಗೋಷ್ಠಿ

ಸುರಪುರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಇದೇ ನವೆಂಬರ್ 12ರಂದು ರಾಷ್ಟ್ರೀಯ ಲೋಕಾದಲತ್ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರದ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಕಮತಗಿ ತಿಳಿಸಿದರು.

ನಗರದ ನ್ಯಾಯಾಲಯದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಾದಲತ್‍ನಿಂದ ಹಲವಾರು ಉಪಯೋಗಗಳು ಆಗಲಿವೆ.ಈ ಹಿಂದೆಯೂಕೂಡ ನಡೆಸಲಾಗಿರುವ ಲೋಕ ಅದಾಲತ್‍ನಲ್ಲಿ ಅನೇಕರು ತಮ್ಮ ವ್ಯಾಜ್ಯವನ್ನು ಪರಿಹಸಿಕೊಂಡಿದ್ದಾರೆ.ಅದರಂತೆ ಈಬಾರಿಯೂ ನಡೆಯಲಿರುವ ಲೋಕ್ ಅದಾಲತ್‍ನ ಸದುಪಯೋಗ ಜನರು ಮಾಡಿಕೊಳ್ಳಬೇಕು ಎಂದರು.ಇದರಿಂದ ಮೇಲಿಂದ ಮೇಲೆ ನ್ಯಾಯಾಲಯಕ್ಕೆ ಕಕ್ಷಿದಾರರು ಬರುವುದು ತಪ್ಪಲಿದೆ ಎಂದು ಅಭಿಪ್ರಾಯಪಟ್ಟರು.

ಲೋಕ ಅದಾಲತ್‍ನಲ್ಲಿ 14 ತರಹದ ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.ಅದರಲ್ಲಿ ಮುಖ್ಯವಾಗಿ,ಚೆಕ್‍ಬೌನ್ಸ್, ಹಣ ಮರುಪಾವತಿ, ಕಾರ್ಮಿಕ ವಿವಾದ, ಜೀವನಾವಶ್ಯಕ ರಾಜಿ ಆಗಬಹುದಾದ ಕೇಸ್, ಮೋಟಾರ್ ವಾಹನ, ಬ್ಯಾಂಕ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಕರಣ, ಭೂ ಸ್ವಾಧೀನ, ವಿಚ್ಛೇದನ ಹೊರತುಪಡಿಸಿ ಕೌಟುಂಬಿಕ ವಿವಾದಗಳು, ಅಪರಾಧಿಕ ಮೊಕದ್ದಮೆಗಳು, ಪಿಎಲ್‍ಎಸ್ ಸೇರಿದಂತೆ ವಿವಿಧ ಪ್ರಕರಣಗಳಿಗೆ ರಾಜಿಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 1450 ಪ್ರಕರಣ, ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ 1200 ಕೇಸ್, ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ 1600 ಕೇಸ್‍ಗಳ ಜತೆಗೆ ಇನ್ನು ಕೆಲವು ಕೇಸ್‍ಗಳು ಬಾಕಿ ಉಳಿದಿವೆ. ಇದರ ಜತೆ ಕೋರ್ಟ್‍ನಲ್ಲಿ ನೋಂದಣಿಯಾಗುತ್ತಿರುವ ಪ್ರಕರಣಗಳಿಗೂ ಇತ್ಯರ್ಥ ಪಡಿಸಲಾಗುವುದು. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಹ ಲೋಕಾದಲತ್‍ನಲ್ಲಿ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದು, ಶಾಲೆಯಲ್ಲಿ ಜನನ ಪ್ರಮಾಣ ಪತ್ರವಿಲ್ಲದೆ ದಾಖಲಾಗಿರುವ ವಿದ್ಯಾರ್ಥಿಯ ಆಧಾರ್ ಕಾರ್ಡ್, ಇಲ್ಲವೇ ತಾಯಿ ಆಧಾರ್ ಕಾರ್ಡ್ ಒದಗಿಸಿ ಎಲ್ಲಿ ಜನಸಿದ್ದು ದಾಖಲಾತಿ ನೀಡಬೇಕು.

ಕೆಂಭಾವಿಯಲ್ಲಿ ಈಗಾಗಲೇ ಪುರಸಭೆಗೆ ಸೂಚಿಸಿದ್ದು, 700 ಜನನ ಪ್ರಮಾಣ ಪತ್ರ ಒದಗಿಸಲಾಗಿದೆ. ಇದಕ್ಕಾಗಿ 12 ಜನ ವಕೀಲಯರು ಈ ಕಾರ್ಯಕ್ಕೆ ಸಹಕರಿಸಲಿದ್ದಾರೆ. ಸುರಪುರದಲ್ಲಿಯೂ ಶೀಘ್ರವೇ ಜನನ ಮತ್ತು ಮರಣ ಪ್ರಮಾಣ ಪತ್ರ ಒದಗಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಸುದ್ದಿಗೋಷ್ಠಿಯಲ್ಲಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago