ನ.2ಕ್ಕೆ ಕಾಳಗಿ ತಹಶೀಲ್ದಾರ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಿಂದ ಅಹವಾಲು ಸ್ವೀಕಾರ

0
62

ಕಲಬುರಗಿ: ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಇದೇ ಅಕ್ಟೋಬರ್ 25 ರಂದು (ಮಂಗಳವಾರ) ಕಾಳಗಿ ತಹಶೀಲ್ದಾರ ಕಛೇರಿಯಲ್ಲಿ ನಿಗದಿಯಾಗಿದ್ದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಆಲಿಕೆ ಕಾರ್ಯಕ್ರಮ ನವೆಂಬರ್ 2ಕ್ಕೆ ಮುಂದೂಡಲಾಗಿದೆ.

ನವೆಂಬರ್ 2 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಕಾಳಗಿ ತಹಶೀಲ್ದಾರ ಕಚೇರಿಯಲ್ಲಿ ಡಿ.ಸಿ. ಅವರು ಲಭ್ಯವಿರಲಿದ್ದಾರೆ. ತಾಲೂಕಿನ ಗ್ರಾಮಸ್ಥರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here